ಪುತ್ತೂರು : ನಂದಿನಿ ಹಾಲು ವಿತರಕರಾಗಿರುವ ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘ ವ್ಯಾಪಾರ ಮಳಿಗೆಯ ಸಿಬ್ಬಂದಿಯಾಗಿದ್ದ ಉದಯ (51) ನಿಧನರಾದರು.

ಅಡೂರು ಮೂಲದ ಉದಯ ಅವರು ಪುತ್ತೂರು ಕೊಡಿಪ್ಪಾಡಿಯಲ್ಲಿ ವಾಸ್ತವ್ಯ ಹೊಂದಿದ್ದು, ಪುತ್ತೂರು ಜೇನು ವ್ಯವಸಾಯ ಸಹಕಾರ ಸಂಘದ ಕಟ್ಟಡದ ಪಕ್ಕದಲ್ಲಿ ನಂದಿನಿ ಹಾಲು ವಿತರಣಾ ಅಂಗಡಿ ಹೊಂದಿದ್ದರು.
ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಗೆ ಬಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ನಿಧನರಾದರು.
ಮೃತರು ಪತ್ನಿ ಮಮತಾ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಉದಯ ಅವರ ಅಂತ್ಯಸಂಸ್ಕಾರ ತರವಾಡು ಮನೆ ಅಡೂರು ಪಾಂಡಿಯಲ್ಲಿ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.


























