ಪುತ್ತೂರು : ಕಬಕ-ಪುತ್ತೂರು ರೈಲ್ವೇ ನಿಲ್ದಾಣಕ್ಕೆ ಭೇಟಿ ನೀಡಿದ ಸಂಸದ ನಳಿನ್ ಕುಮಾರ್ ಕಟೀಲ್ ವಿದ್ಯುತ್ ರೈಲು ಸಂಚಾರಕ್ಕಾಗಿ ನಡೆದ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.


ಈ ವೇಳೆ ಮಾತನಾಡಿದ ಅವರು, ಹಾಸನದಿಂದ ಮಂಗಳೂರು ತನಕ ವಿದ್ಯುತ್ ರೈಲು ಸಂಚಾರಕ್ಕಾಗಿ ಕಾಮಗಾರಿಗಳು ನಡೆಯುತ್ತಿದೆ. ಪುತ್ತೂರಿನಿಂದ ಮಂಗಳೂರಿನ ಪಡೀಲ್ ವರೆಗಿನ ಎಲೆಕ್ಟ್ರಿಫಿಕೇಶನ್ ಮುಗಿದಿದೆ. ಪುತ್ತೂರು-ಸುಬ್ರಹ್ಮಣ್ಯ ಡಿಸೆಂಬರ್ ನೊಳಗೆ ಪೂರ್ಣಗೊಳ್ಳಲಿದೆ.

ಬಾಕಿ ಉಳಿದಿರುವ ಸಕಲೇಶಪುರವರೆಗಿನ ಎಲೆಕ್ಟ್ರಿಫಿಕೇಶನ್ 2024ರ ಮಾರ್ಚ್ ತಿಂಗಳಿನೊಳಗೆ ಮುಗಿಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುಮಾರು 150 ಕೋಟಿ ರೂ. ವೆಚ್ಚದಲ್ಲಿ ಈ ಕಾಮಗಾರಿಗಳು ನಡೆಯುತ್ತಿದೆ. ಈ ಕಾಮಗಾರಿ ಪೂರ್ತಿಯಾದ ಕೂಡಲೇ ಬೆಂಗಳೂರು-ಮಂಗಳೂರು ವಂದೇ ಭಾರತ್ ರೈಲು ಸಂಚಾರ ನೀಡ್ತೆವೆ ಎಂದು ಸಚಿವರು ಈಗಾಗಲೇ ಹೇಳಿದ್ದಾರೆ.

ಈ ಹಿನ್ನೆಲೆ ಅಧಿಕಾರಿಗಳಿಗೆ ಆದಷ್ಟು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ ನೀಡಿದ್ದೇವೆ ಎಂದು ಹೇಳಿದರು.






























