ಉತ್ತರ ಪ್ರದೇಶದ ಕಾನ್ಪುರದಲ್ಲಿ ತಂದೆ ಮತ್ತು ಮಗ ಡೆಡ್ಲಿ ರೆಬೀಸ್ಗೆ ಸಾವನ್ನಪ್ಪಿದ್ದಾರೆ.
ಮೃತರ ಮನೆಯ ಬೆಕ್ಕಿಗೆ ಹುಚ್ಚು ನಾಯಿಯೊಂದು ಕಚ್ಚಿತ್ತು. ಬಳಿಕ ಈ ಬೆಕ್ಕು ತನ್ನ ಮಾಲೀಕರಿಬ್ಬರಿಗೆ ಕಚ್ಚಿತ್ತು. ಕಚ್ಚಿದ ಒಂದು ವಾರದಲ್ಲಿ ಇಬ್ಬರೂ ಸಾವನ್ನಪ್ಪಿದ್ದಾರೆ.

ಏನಿದು ಘಟನೆ..?
ಕಾನ್ಪುರ ನಗರದ ಅಕ್ಬರ್ ಪುರದಲ್ಲಿ ಮೃತರ ನಿವಾಸ ಇತ್ತು. ಇವರು ಮನೆಯಲ್ಲಿ ಬೆಕ್ಕನ್ನು ಸಾಕಿದ್ದರು. ತುಂಬಾ ಮುದ್ದಿನಿಂದ ಬೆಕ್ಕನ್ನು ಸಾಕಿದ್ದರು. ಕುಟುಂಬದ ಎಲ್ಲಾ ಸದಸ್ಯರೂ ಕೂಡ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ದರು. ಒಂದು ದಿನ ಆ ಬೆಕ್ಕಿ ಬೀದಿ ನಾಯಿಯೊಂದು ಕಚ್ಚಿತ್ತು. ಕಚ್ಚಿದ್ದ ಕೆಲವೇ ದಿನಗಳಲ್ಲಿ ಆ ಬೆಕ್ಕಿನ ದೇಹದಲ್ಲಿ ರೇಬಿಸ್ ಲಕ್ಷಗಳು ಕಾಣಿಸಿಕೊಂಡಿದ್ದವು.
ಎಂದಿನಂತೆ ಬೆಕ್ಕಿನ ಜೊತೆ ಮನೆಯ ಸದಸ್ಯರು ಆಟವಾಡುತ್ತಿರುವಾಗ ಒಂದು ದಿನ ಅದು ತನ್ನ ಮಾಲೀಕನ ಮಗನಿಗೆ ಗಾಯಮಾಡಿತ್ತು. ಕೆಲ ದಿನಗಳ ಬೆನ್ನಲ್ಲೇ ಆತನ ಆರೋಗ್ಯ ಹದಗೆಡಲು ಶುರುವಾಯಿತು. ಕೊನೆ ಕೊನೆಗೆ ಆತ ಬೆಕ್ಕಿನ ಹಾಗೆಯೇ ವರ್ತಿಸಲು ಶುರುಮಾಡಿದ್ದ. ಕೊನೆಗೆ ಆತ ಮೃತಪಟ್ಟಿದ್ದ. ಮಗ ಮೃತಪಟ್ಟು ದಿನ ಕಳೆಯುವಷ್ಟರಲ್ಲಿ ತಂದೆಗೂ ಕೂಡ ಅದೇ ಪರಿಸ್ಥಿತಿ ಎದುರಾಯ್ತು. ಅವರೂ ಕೂಡ ರೇಬಿಸ್ನಿಂದ ಸಾವನ್ನಪ್ಪಿದರು.
ಜನರು ಗಾಬರಿ..!
ಈ ವಿಚಾರ ಸ್ಥಳೀಯರಿಗೆ ಗೊತ್ತಾಗುತ್ತಿದ್ದಂತೆ ಬೆಚ್ಚಿಬಿದ್ದಿದ್ದಾರೆ. ಅವರ ಮನೆಗೆ ಯಾರೂ ಭೇಟಿ ನೀಡುತ್ತಿಲ್ಲ. ಜೊತೆಗೆ ಆ ಪ್ರದೇಶದಲ್ಲಿ ಓಡಾಡೋದಕ್ಕೂ ಅಂಜುತ್ತಿದ್ದಾರೆ. ಸದ್ಯ ಉಳಿದಿರುವ ಅವರ ಕುಟುಂಬಸ್ಥರನ್ನು ಕಾನ್ಪುರಕ್ಕೆ ಕಳುಹಿಸಲಾಗಿದೆ. ಅವರೆಲ್ಲರೂ ಸುರಕ್ಷಿತವಾಗಿದ್ದಾರೆ.
ವೈದ್ಯರು ಹೇಳೋದೇನು..?
ಹಿರಿಯ ವೈದ್ಯಾಧಿಕಾರಿ ಅಮಿತ್ ಕಟಿಯಾರ್.. ನಾವು ಸಾಕಿದ ಪ್ರಾಣಿಗಳಿಗೆ ಆಟಿ ರೇಬಿಸ್ ಇಂಜೆಕ್ಷನ್ಗಳನ್ನು ಹಾಕಿಸಲೇಬೇಕು. ಸಾಕು ಪ್ರಾಣಿಗಳು ಮನೆಯ ಸದಸ್ಯರಿಗೆ ಕಚ್ಚಿದರೆ ಕೂಡಲೇ ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದುಕೊಳ್ಳಬೇಕು ಎಂದಿದ್ದಾರೆ.




























