ಮಂಗಳೂರು : ದೀಪಕ್ ರಾವ್ ಹಾಗೂ ಪ್ರಶಾಂತ್ ಪೂಜಾರಿ ಹತ್ಯೆ ಪ್ರಕರಣವನ್ನು ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಸುವಂತೆ ಅವರ ಮನೆಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ಹತ್ಯೆಯಾದ ದೀಪಕ್ ರಾವ್ ರವರ ತಾಯಿ ಹಾಗೂ ಪ್ರಶಾಂತ್ ಪೂಜಾರಿ ರವರ ತಾಯಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರವರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ದೀಪಕ್ ರಾವ್ ತಾಯಿ ನೀಡಿದ ಮನವಿ ಪತ್ರದಲ್ಲೇನಿದೆ..!!?
ನನ್ನ ಮಗನಾದ ದೀಪಕ್ ರಾವ್ ನ ಕೊಲೆಯು ನಡೆದು ಜನವರಿಗೆ 6 ವರ್ಷಗಳಾಗುತ್ತದೆ. ಈ ಕೊಲೆ ಪ್ರಕರಣದ ತನಿಖೆಯು ಶೀಘ್ರವಾಗಿ ನಡೆದು ಅಪರಾಧಿಗಳಿಗೆ ಶಿಕ್ಷೆಯಾಗುವುದು ಎಂಬ ನಿರೀಕ್ಷೆಯಲ್ಲಿದ್ದೆವು. ಆದರೆ ನ್ಯಾಯಾಲಯದಲ್ಲಿ ತನಿಖೆಯು ನಿರೀಕ್ಷೆಯಂತೆ ಶೀಘ್ರಗತಿಯಲ್ಲಿ ನಡೆಯುತ್ತಿಲ್ಲ.
ಇತ್ತೀಚೆಗೆ ಗಮನಿಸಿದ ವಿಷಯವೇನೆಂದರೆ, ಗೌರಿ ಲಂಕೇಶ್ ಮತ್ತು ಕಲಬುರ್ಗಿ ಹತ್ಯೆ ಪ್ರಕರಣವನ್ನು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಿ ಶೀಘ್ರಗತಿಯಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಮಾಡುವುದಾಗಿ ಭರವಸೆ ನೀಡಿರುವುದು ಶ್ಲಾಘನೀಯವಾಗಿದೆ. ಹಾಗೆಯೇ ನನ್ನ ಮಗನಾದ ದೀಪಕ್ ರಾವ್ ಕೊಲೆ ಪ್ರಕರಣವನ್ನು ವಿಶೇಷ ನ್ಯಾಯಾಲಯದ ಮೂಲಕ ತನಿಖೆ ನಡೆಸಿ ಅಪರಾಧಿಗಳನ್ನು ಶೀಘ್ರವಾಗಿ ಶಿಕ್ಷೆಗೆ ಒಳಪಡಿಸಿ ನನ್ನ ಮಗನಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ಮನವಿಯಲ್ಲಿ ವಿನಂತಿಸಿದ್ದಾರೆ.
ಪ್ರಶಾಂತ್ ಪೂಜಾರಿ ತಾಯಿ ನೀಡಿದ ಮನವಿ ಪತ್ರದಲ್ಲೇನಿದೆ..!!?
2015ರಲ್ಲಿ ನನ್ನ ಮಗನಾದ ಪ್ರಶಾಂತ್ ಪೂಜಾರಿಯವರ ಕೊಲೆಯು ನಡೆದಿದ್ದು, ಈ ಪ್ರಕರಣದ ತನಿಖೆಯು ಶೀಘ್ರವಾಗಿ ನಡೆದು ಅಪರಾಧಿಗಳಿಗೆ ಶಿಕ್ಷೆಯಾಗುವುದು ಎಂಬ ನಿರೀಕ್ಷೆಯಲ್ಲಿದ್ದೆವು. ಆದರೆ ನ್ಯಾಯಾಲಯದಲ್ಲಿ ತನಿಖೆಯು ನಿರೀಕ್ಷೆಯಂತೆ ಶೀಘ್ರಗತಿಯಲ್ಲಿ ನಡೆಯುತ್ತಿಲ್ಲ.
ಇತ್ತೀಚೆಗೆ ಗಮನಿಸಿದ ವಿಷಯವೇನೆಂದರೆ, ಗೌರಿ ಲಂಕೇಶ್ ಮತ್ತು ಕಲಬುರ್ಗಿ ಹತ್ಯೆ ಪ್ರಕರಣವನ್ನು ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಿ ಶೀಘ್ರಗತಿಯಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವಂತೆ ಮಾಡುವುದಾಗಿ ಭರವಸೆ ನೀಡಿರುವುದು ಶ್ಲಾಘನೀಯವಾಗಿದೆ. ಹಾಗೆಯೇ ನನ್ನ ಮಗನಾದ ಪ್ರಶಾಂತ್ ಪೂಜಾರಿ ಕೊಲೆ ಪ್ರಕರಣವನ್ನು ವಿಶೇಷ ನ್ಯಾಯಾಲಯದ ಮೂಲಕ ತನಿಖೆ ನಡೆಸಿ ಅಪರಾಧಿಗಳನ್ನು ಶೀಘ್ರವಾಗಿ ಶಿಕ್ಷೆಗೆ ಒಳಪಡಿಸಿ ನನ್ನ ಮಗನಿಗೆ ನ್ಯಾಯ ಒದಗಿಸಿ ಕೊಡಬೇಕೆಂದು ಮನವಿಯಲ್ಲಿ ವಿನಂತಿಸಿದ್ದಾರೆ.


























