ಮಂಗಳೂರು : ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ. ಪ್ರಭಾಕರ ಭಟ್ ರವರ ಮೇಲೆ ಕೇಸು ದಾಖಲಿಸಲಾಗಿದ್ದು, ಈ ವಿಚಾರವನ್ನು ಬಜರಂಗದಳ ಖಂಡಿಸಿದೆ.
ಹಲವಾರು ದಶಕಗಳಿಂದ ಹಿಂದೂ ಸಮಾಜದ ಜಾಗೃತಿಯ ಕೆಲಸ ಮಾಡುತ್ತಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಮುಖರಾದ ಡಾ.ಕಲ್ಲಡ್ಕ ಪ್ರಭಾಕರ ಭಟ್ ರವರ ಮೇಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಾಷಣ ಮಾಡಿದಕ್ಕೆ ಕೇಸು ದಾಖಲಿಸಿದ್ದು ಖಂಡನೀಯ, ತ್ರಿವಳಿ ತಲಾಕ್ ನಿಷೇಧದಿಂದ ಮುಸ್ಲಿಂ ಮಹಿಳೆಯರಿಗೆ ಸಮಾಜದಲ್ಲಿ ಸಮಾನತೆಯ ಹಕ್ಕು ಕೇಂದ್ರ ಸರಕಾರ ನೀಡಿದ್ದನ್ನು ತನ್ನ ಭಾಷಣದಲ್ಲಿ ಉಲ್ಲೇಖಿಸಿ ಭಾಷಣ ಮಾಡಿದ್ದು, ಆದರೆ ಇದನ್ನೆ ಅಸ್ತ್ರವಾಗಿ ಬಳಸಿಕೊಂಡು ಕಾಂಗ್ರೆಸ್ ಸರ್ಕಾರ ಇಲಾಖೆಗಳನ್ನು ಬಳಸಿಕೊಂಡು ಪ್ರಭಾಕರ್ ಭಟ್ ಅವರ ಮೇಲೆ ಕೇಸು ದಾಖಲಿಸುವ ಮೂಲಕ ಸಂಘ ಮತ್ತು ಹಿಂದೂ ಸಂಘಟನೆಗಳನ್ನು ಧಮನಿಸುವ ಸಂಚು ಮಾಡುತ್ತಿದ್ದು ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗವಾಗಿದೆ.
ಡಾ. ಕಲ್ಲಡ್ಕ ಪ್ರಭಾಕರ ಭಟ್ ರವರ ಮೇಲೆ ಹಾಕಿರುವ ಕೇಸನ್ನು ವಾಪಸು ಪಡೆಯಬೇಕೆಂದು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕರಾದ ಮುರಳಿಕೃಷ್ಣ ಹಸಂತಡ್ಕ ಆಗ್ರಹಿಸಿದ್ದಾರೆ.

























