ಉಡುಪಿ : ಜುಮಾ ನಮಾಝ್ ವೇಳೆ ಹೃದಯಾಘಾತದಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಅಂಜುಮಾನ್ ಮಸೀದಿಯಲ್ಲಿ ನಡೆದಿದೆ.
ದೊಡ್ಡಣಗುಡ್ಡೆಯ ಕರಂಬಳ್ಳಿ ನಿವಾಸಿ ಮುಸ್ತಾಕ್(55) ಮೃತ ವ್ಯಕ್ತಿ.
ಶುಕ್ರವಾರ ಮಧ್ಯಾಹ್ನದ ನಮಾಜ್ಗೆಂದು ಮುಸ್ತಾಕ್ ಅವರು ಅಂಜುಮಾನ್ ಮಸೀದಿಗೆ ಬಂದಿದ್ದು, ಎಲ್ಲರೂ ತಮ್ಮ ಪಾಡಿಗೆ ನಮಾಜ್ ಮಾಡುತ್ತಿರುವಾಗ ಮುಸ್ತಾಕ್ ಕುಳಿತಲ್ಲೇ ಉರುಳಿ ಬಿದ್ದಿದ್ದಾರೆ.
ಮುಸ್ತಾಕ್ ಅವರು ಶುಕ್ರವಾರ ಮಧ್ಯಾಹ್ನದ ಜುಮಾ ನಮಾಜ್ಗಾಗಿ ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪದ ಅಂಜುಮಾನ್ ಮಸೀದಿಗೆ ಬಂದಿದ್ದರು. ಅವರು ಖುತ್ಬಾ ಕೇಳಲು ಕುಳಿತಿದ್ದಾಗ ಒಮ್ಮಿಂದೊಮ್ಮೆಗೇ ಏನೋ ಆದಂತಾಗಿ ಕುಳಿತಿದ್ದಲ್ಲೇ ಕುಸಿದು ಬಿದ್ದರು. ಅವರ ಜೊತೆಗೆ ನಮಾಜ್ ಮಾಡುತ್ತಿದ್ದವರಿಗೆ ಮೊದಲು ಏನಾಗುತ್ತಿದೆ ಎಂದು ಅರ್ಥವಾಗಿಲ್ಲ. ಯಾರೂ ಸಹ ಅಷ್ಟು ಅವರತ್ತ ಗಮನಹರಿಸದೇ ತಮ್ಮ ಪಾಡಿಗೆ ತಾವು ನಮಾಜ್ ಮಾಡುತ್ತಿದ್ದರು. ಸ್ವಲ್ಪ ಹೊತ್ತಿನ ಬಳಿಕ ಕೂಡಲೇ ಅವರನ್ನು ಮೇಲೆ ಎಬ್ಬಿಸಲು ಪ್ರಯತ್ನಿಸಿದ್ದಾರೆ. ಆದ್ರೆ, ಮುಸ್ತಾಕ್ ಮೇಲೇಳಲೇ ಇಲ್ಲ. ನಂತರ ಎತ್ತಿಕೊಂಡು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅವರನ್ನು ಬದುಕಿಸಲು ಸಾಧ್ಯವಾಗಲಿಲ್ಲ.