ಪುತ್ತೂರು : ಜಾಗದ ವಿಚಾರವಾಗಿ ಕೆದಿಲ ಗ್ರಾಮದ ನಿವೃತ್ತ ಯೋಧ ಶಿವರಾಮ್ ಭಟ್ ಮತ್ತು ಅವರ ಪತ್ನಿಗೆ ಸವಿತಾ ಭಟ್ ರವರಿಗೆ ಅನ್ಯಕೋಮಿನ ತಂಡವೊಂದು ಹಲ್ಲೆ ನಡೆಸಿರುವುದು ಖಂಡನೀಯ ಹಾಗೂ ಈ ತಂಡದಲ್ಲಿ ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ಕೂಡ ಸೇರಿಕೊಂಡಿರುವುದು ಖೇದಕರ ಎಂದು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ಸಾಜ ರಾಧಕೃಷ್ಣ ಆಳ್ವ ತಿಳಿಸಿದ್ದಾರೆ.
ಅನೇಕ ವರ್ಷದಿಂದ ವಾಸ ಮಾಡುತ್ತಾ ಕೃಷಿ ಕೆಲಸ ಮಾಡಿಕೊಂಡು ಬಂದಿರುವ ಕುಟುಂಬ ತಮ್ಮದೇ ಜಾಗದಲ್ಲಿ ಭಯಭೀತಿಯಿಂದ ಬದುಕಬೇಕಾಗಿ ಬಂದಿರುವಂತದ್ದು, ಕಳವಳಕಾರಿ ಎಂದು ಅವರು ಹೇಳಿದ್ದಾರೆ.
ಪೋಲೀಸ್ ಇಲಾಖೆ ಗಂಭೀರವಾಗಿ ಈ ಪ್ರಕರಣ ಗಂಭೀರವಾಗಿ ಪರಿಗಣಿಸಿ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕಾಗಿ ಅವರು ಆಗ್ರಹಿಸಿದ್ದಾರೆ.
ಈ ಸಂದರ್ಭದಲ್ಲಿ ಪುತ್ತೂರು ಗ್ರಾಮಾಂತರ ಮಂಡಲ ಉಪಾಧ್ಯಕ್ಷರಾದ ಹರಿಪ್ರಸಾದ್ ಯಾದವ್, ಪ್ರಧಾನ ಕಾರ್ಯದರ್ಶೀ ನಿತೀಶ್ ಶಾಂತಿವನ ಕೆದಿಲ, ಶಕ್ತಿ ಕೇಂದ್ರ ಸಂಚಾಲಕರಾದ ಪದ್ಮನಾಭ ಭಟ್ ಈ ಸಂದರ್ಭದಲ್ಲಿ ಜೊತೆಗಿದ್ದರು.