ಚಿಕ್ಕಮಗಳೂರು : ಸೇನೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಗ್ಗಾ ಸಮೀಪದ ಯಡದಾಳು ಗ್ರಾಮದಲ್ಲಿ ನಡೆದಿದೆ.
ಕಾರ್ತಿಕ್ (23) ಆತ್ಮಹತ್ಯೆ ಮಾಡಿಕೊಂಡ ಯುವಕ.
ಭಾರತೀಯ ಸೇನೆಯ ಪರೀಕ್ಷೆಯಲ್ಲಿ ಫೇಲ್ ಆಗಿದ್ದೇನೆ. ಇದನ್ನು ಮನೆಯವರಿಗೆ ಹೇಳುವ ಧೈರ್ಯ ನನ್ನ ಬಳಿ ಇಲ್ಲ. ಡೆತ್ ನೋಟ್ ಬರೆದಿಟ್ಟು ಕಾರ್ತಿಕ್ ನೇಣಿಗೆ ಶರಣಾಗಿದ್ದಾನೆ.
ಕಾರ್ತಿಕ್ ಸೇನೆಗೆ ಸೇರಬೇಕೆಂದು 2 ವರ್ಷದಿಂದ ನಿರಂತರ ಪ್ರಯತ್ನಿಸುತ್ತಿದ್ದ. ಸೇನಾ ನೇಮಕಾತಿ ಪರೀಕ್ಷೆಯ ರಿಸಲ್ಟ್ ಬಂದ ಹಿನ್ನಲೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.