ವಿಟ್ಲ : ಪೊಲೀಸ್ ಠಾಣಾ ವ್ಯಾಪ್ತಿಯ ಬಂಟ್ವಾಳ ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ, ಕರ್ನಾಟಕ ಬ್ಯಾಂಕಿನಲ್ಲಿ ನಡೆದ ನಗದು ಹಾಗೂ ಚಿನ್ನಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಟ್ಲ ಠಾಣೆಯಲ್ಲಿ ಅ.ಕ್ರ. 25/2024 ಕಲಂ:457,380 ಬಾಧಂಸಂ ರಂತೆ ಪ್ರಕರಣ ದಾಖಲಿಸಿಕೊಂಡು ವಿಶೇಷ ತನಿಖಾ ತಂಡ ತನಿಖೆ ನಡೆಸಲಾಗಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ ಗೂಡಿನ ಬಳಿ ನಿವಾಸಿ ಮಹಮ್ಮದ್ ರಫೀಕ್ @ ಗೂಡಿನ ಬಳಿ ರಫೀಕ್ (35), ಮಂಜೇಶ್ವರ ಬಿಂಗಿನಾನಿ ನಿವಾಸಿಇಬ್ರಾಹಿಂ ಕಲಂದರ್ (41), ಮಂಜೇಶ್ವರ ಗಾಳಿಯಡ್ಕ ನಿವಾಸಿ ದಯಾನಂದ ಎಸ್ (37) ಬಂಧಿತರು
ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಪ್ರಗತಿಯಲ್ಲಿರುತ್ತದೆ.


























