ಪುತ್ತೂರು ಬಜರಂಗದಳದ ನಾಲ್ವರು ಕಾರ್ಯಕರ್ತರ ಗಡಿಪಾರು ಆದೇಶಕ್ಕೆ ಕರ್ನಾಟಕ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಪುತ್ತೂರು ಸಂಪ್ಯ ನಿವಾಸಿ ಪ್ರಜ್ವಲ್, ತಿಂಗಳಾಡಿಯ ನಿತಿನ್ , ದಿನೇಶ್ ಹಾಗು ಒಳಮೊಗ್ರು ಗ್ರಾಮದ ಅಜಲಡ್ಕ ನಿವಾಸಿ ಪ್ರದೀಪ್ ಎಂಬವರನ್ನು ಬಾಗಲಕೋಟೆ ಜಿಲ್ಲೆಗೆ ಗಡಿಪಾರು ಮಾಡಲು ಪೊಲೀಸ್ ಇಲಾಖೆ ಶಿಫಾರಸ್ಸು ಮಾಡಿತ್ತು.
ಆರೋಪಿಗಳ ಪರವಾಗಿ ನ್ಯಾಯವಾದಿ ಸುಯೋಗ್ ಹೇರಳೆ ವಾದ ಮಂಡಿಸಿದ್ದರು.