ಮಂಗಳೂರು : ಬಸ್ಸಿನಲ್ಲಿ ಅಸಭ್ಯವಾಗಿ ವರ್ತಿಸಿದ ಅನ್ಯಕೋಮಿನಯುವಕನಿಗೆ ಯುವತಿಯ ಸಂಬಂಧಿಕರು ಧರ್ಮದೇಟು ನೀಡಿರುವ ಘಟನೆ ಮಂಗಳೂರಿನ ಬಲ್ಲಾಳ್ ಬಾಗ್ ಎಂಬಲ್ಲಿ ನಡೆದಿದೆ. ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಂಪೆನಿಯೊಂದರ ಪ್ರಾಡಕ್ಟ್ ಸೇಲ್ ಕೆಲಸ ಮಾಡಿಕೊಂಡಿರುವ 19 ವರ್ಷದ ಯುವತಿ ಕಚೇರಿಗೆ ಹೋಗಿ ಪ್ರಾಡಕ್ಟ್ಗಳನ್ನು ತೆಗೆದುಕೊಂಡು ಮಾರಾಟ ಮಾಡಲು ನಾಗುರಿಯಿಂದ ಬಸ್ನಲ್ಲಿ ಬೆಳಗ್ಗೆ ಸ್ಟೇಟ್ ಬ್ಯಾಂಕ್ಗೆ ಬಂದಿದ್ದರು.
ಸ್ಟೇಟ್ ಬ್ಯಾಂಕ್ನಿಂದ ಬಜಪೆ ಕಡೆಗೆ ಹೋಗಲು ಖಾಸಗಿ ಬಸ್ನಲ್ಲಿ ಕುಳಿತಿದ್ದರು. ಆಕೆಯನ್ನು ಹಿಂಬಾಲಿಸಿಕೊಂಡು ಬಂದಿದ್ದ ಸುಮಾರು 27ರಿಂದ 28 ವರ್ಷ ವಯಸ್ಸಿನ ಯುವಕ ಆಕೆಯ ಹಿಂಬದಿಯ ಸೀಟಿನಲ್ಲಿ ಕುಳಿತು ಮಾನಭಂಗ ಮಾಡುವ ಉದ್ದೇಶದಿಂದ ಸೊಂಟಕ್ಕೆ ಕೈ ಹಾಕಿ ಎಳೆದಿದ್ದಾನೆ ಎಂದು ಆರೋಪಿಸಲಾಗಿದೆ.