ಮೈಸೂರು : ಮದುವೆ ಆಗ್ತೀನಿ ಅಂತ ನಂಬಿಸಿ ವಿಚ್ಛೇದಿತ ಮಹಿಳೆಯನ್ನು ಯುವಕನೊಬ್ಬ ಲೈಂಗಿಕವಾಗಿ ಬಳಸಿಕೊಂಡ ಆರೋಪವೊಂದು ಕೇಳಿ ಬಂದಿದೆ.
ಮೈಸೂರಿನ ಬೋಗಾದಿಯ ಬ್ಯಾಂಕರ್ಸ್ ಕಾಲೋನಿಯ ಮಹಿಳೆ ಯುವಕನಿಂದ ವಂಚನೆಗೆ ಒಳಗಾಗಿದ್ದಾರೆ. ವಂಚನೆಗೆ ಒಳಗಾದ 34 ವರ್ಷದ ಮಹಿಳೆ ನಗರದ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದಳು.
ಮಹಿಳೆಯೂ 2018ರಲ್ಲಿ ಗಂಡನಿಂದ ವಿಚ್ಛೇದನ ಪಡೆದು ಸ್ವತಂತ್ರವಾಗಿ ಬದುಕುತ್ತಿದ್ದಳು.
ಒಬ್ಬಂಟಿಯಾಗಿ ಜೀವನ ಸಾಗಿಸುತ್ತಿದ್ದ ವಿಚ್ಛೇದಿತ ಮಹಿಳೆಯ ಬಾಳಲ್ಲಿ ಹರೀಶ ಎಂ (25) ಎಂಬ ಯುವಕನ ಆಗಮನವಾಗಿದೆ. ಈತನೇ ಮಹಿಳೆಯನ್ನು ಮದುವೆಯಾಗುತ್ತೇನೆ ಎಂದು ನಂಬಿಸಿ ಗರ್ಭಿಣಿ ಮಾಡಿ ಪರಾರಿಯಾಗಿದ್ದಾನೆ.
ಆರೋಪಿಯೂ ಕೊಳ್ಳೆಗಾಲದ ತೇರಂಬಳ್ಳಿ ಗ್ರಾಮದ ನಿವಾಸಿ. ಮೈಸೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಇಬ್ಬರು ಹವ್ಯಾಸಿ ಹಾಡುಗಾರರಾಗಿದ್ದರು. ಆಗಾಗ ಸಿಂಗಿಂಗ್ ಇವೆಂಟ್ಸ್ಗಳಲ್ಲಿ ಹಾಡು ಹೇಳಲು ಹೋಗುತ್ತಿದ್ದಾಗ ಪರಸ್ಪರ ಪರಿಚಯ ಮಾಡಿಕೊಂಡಿದ್ದಾರೆ.
ಆ ಪರಿಚಯ ಪ್ರೇಮಕ್ಕೆ ತಿರುಗಿದೆ. ಮಹಿಳೆಗೆ ಪ್ರೀತಿ ಮಾಡುವಂತೆ ಯುವಕ ಬೆನ್ನು ಬಿದ್ದಿದ್ದನಂತೆ. ಹೀಗಾಗಿ ಯುವಕನ ಒತ್ತಡಕ್ಕೆ ಮಣಿದ ಟೀಚರ್ ಪ್ರೀತಿ ಮಾಡಲು ಒಪ್ಪಿಗೆ ನೀಡಿದ್ದಾರಂತೆ. ಮಹಿಳೆ ಮನೆಗೆ ಆಗಾಗ ಹರೀಶ್ ಬಂದು ಹೋಗುತ್ತಿದ್ದನಂತೆ. ಮದ್ಯ ಕುಡಿಸಿ ನನ್ನ ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡು ಅತ್ಯಾಚಾರ ಮಾಡಿದ್ದಾನೆ ಎಂದು ಶಿಕ್ಷಕಿ ಆರೋಪ ಮಾಡಿದ್ದಾರೆ.
ನನ್ನ ಮೇಲೆ ಅತ್ಯಾಚಾರ ಮಾಡಿ ಈಗ ಕಳೆದ ಎರಡು ತಿಂಗಳಿಂದ ಕಾಣೆಯಾಗಿದ್ದಾನೆ. ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ. ಹಾಗಾಗಿ ಸರಸ್ವತಿ ಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ. ಪೊಲೀಸರಿಂದ ನನಗೆ ನ್ಯಾಯಸಿಗುವ ಭರವಸೆ ಇದೆ. ಆತ ನನ್ನನ್ನ ಮದುವೆಯಾದರೆ ಕೇಸ್ ವಾಪಸ್ ಪಡೆಯುತ್ತೇನೆ. ನನಗೆ ನ್ಯಾಯ ಕೊಡಿಸಿ ಎಂದು ಮಹಿಳೆ ಬೇಡಿಕೊಳ್ಳುತ್ತಿದ್ದಾರೆ.
ಈ ಘಟನೆ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.