ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನ ಮಾಜಿ ಅಧ್ಯಕ್ಷರಾದ ಎಲ್.ಎನ್ ಕುಡೂರು ಅವರಿಗೆ ನುಡಿ ನಮನ ಸಲ್ಲಿಸಲಾಯಿತು.

ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕಿನ ಪ್ರಧಾನ ಕಚೇರಿಯಲ್ಲಿ ಹಾಗೂ ಎಲ್ಲಾ ಶಾಖೆಗಳಲ್ಲಿ ನುಡಿ ನಮನ ಸಲ್ಲಿಸಿ, ಚಿರಶಾಂತಿ ಕರುಣಿಸಲಿ ಎಂದು ಬ್ಯಾಂಕಿನ ಅಧ್ಯಕ್ಷರು, ನಿರ್ದೇಶಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಸಿಬ್ಬಂದಿ ವರ್ಗ, ಸದಸ್ಯರು ಪ್ರಾರ್ಥನೆ ಸಲ್ಲಿಸಿದರು.

ಪುತ್ತೂರು ಶಾಖೆಯ ವತಿಯಿಂದ ಬ್ಯಾಂಕ್ ನ ಉಪಾಧ್ಯಕ್ಷರಾದ ಮೋಹನ್ ಕೆ.ಎಸ್., ಕಾನೂನು ಸಲಹೆಗಾರ ಎಂ.ಟಿ ಗೋಪಾಲಕೃಷ್ಣ ಭಟ್, ಶಾಖಾ ವ್ಯವಸ್ಥಾಪಕರು ಹಾಗೂ ಸಿಬ್ಬಂದಿ ವರ್ಗ, ಕಮಿಷನ್ ಏಜೆಂಟ್ಸ್, ಗ್ರಾಹಕರು ಎಲ್.ಎನ್ ಕುಡೂರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಮೌನ ಪ್ರಾರ್ಥನೆ ಮೂಲಕ ನುಡಿ ನಮನ ಸಲ್ಲಿಸಿದರು.


ಎಲ್.ಎನ್ ಕುಡೂರು ಅವರು ವಿಟ್ಲ ಗ್ರಾಮೀಣ ಸಹಕಾರಿ ಬ್ಯಾಂಕ್ ನಲ್ಲಿ 2006ನೇ ಇಸವಿಯಿಂದ ನಿರ್ದೇಶಕರಾಗಿ ಹಾಗೂ 1-04-2010 ರಿಂದ 08-03-2020ರ ತನಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಬ್ಯಾಂಕಿನ ಸರ್ವತೋಮುಖ ಅಭಿವೃದ್ಧಿಗೆ ಭದ್ರ ಬುನಾದಿ ಕಲ್ಪಿಸಿದ್ದರು.


























