ಉಪ್ಪಿನಂಗಡಿ : ಮನೆಯಲ್ಲಿ ವಿದ್ಯುತ್ ಇಲ್ಲದ ಹಿನ್ನಲೆ ವಿದ್ಯುತ್ ಪರಿವರ್ತಕದ ಬಳಿ ಪ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ಘಟನೆ ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.
ತಿಮ್ಮಪ್ಪ ಗೌಡ ಎಂಬವರ ಪುತ್ರ ಹರೀಶ (32) ಮೃತ ಯುವಕ.

ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಹರೀಶ, ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ತೆರಳಿ ಪ್ಯೂಸ್ ಹಾಕಲು ನೋಡಿದ್ದು, ಈ ಸಂದರ್ಭ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.



























