ಮಂಗಳೂರು : ನಗರದ ನಂತೂರು ಪದವು ಬಳಿ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ಸವಾರನನ್ನು ಅಡ್ಯಾರ್ ಕಣ್ಣೂರು ನಿವಾಸಿ ಎಂದು ಹೇಳಲಾಗುತ್ತಿದೆ.
ನಂತೂರು ಪದವು ರಸ್ತೆಯಲ್ಲಿ ಹೋಗುತ್ತಿದ್ದಾಗ ಸವಾರನ ನಿಯಂತ್ರಣ ತಪ್ಪಿ ಉರುಳಿದ ಸ್ಕೂಟರ್ ಮೇಲೆ ಹಿಂದಿನಿಂದ ಚಲಿಸುತ್ತಿದ್ದ ಟ್ಯಾಂಕರ್ ಹರಿದಿದೆ. ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಂಚಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.