ಮಂಗಳೂರು : ಉದ್ಯೋಗದ ಮೂಲಕ ಜೀವನ ಕಲ್ಪಿಸಿಕೊಟ್ಟ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರನ್ನು ಎಸ್.ಇ. ಝೆಡ್. ನಿರಾಶ್ರಿತರು ಭೇಟಿ ಮಾಡಿ ಸಂಸದರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿ, ಅಭಿನಂದಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮೂಲ್ಕಿ ಮೂಡಬಿದ್ರಿ ಕ್ಷೇತ್ರದ ರೈತ ಮೋರ್ಚಾದ ಅಧ್ಯಕ್ಷರಾದ ರಾಜೇಶ್ ಅಮೀನ್, ಬಜ್ಪೆ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷರಾದ ವಿಜಯಕುಮಾರ್, ಭೂ ನ್ಯಾಯ ಮಂಡಳಿಯ ಸದಸ್ಯರಾದ ಜಯಂತ್ ತೋಕೂರು, ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾದ ರಿತೇಶ್ ಶೆಟ್ಟಿ, ಬಿಜೆಪಿ ಮುಖಂಡರಾದ ಲೋಕೇಶ್ ಪೂಜಾರಿ ಬಜಪೆ, ಮಹೇಶ್ ತುಪ್ಪೆಕಲ್ಲ್, ವಿಶ್ವ ಶೆಟ್ಟಿ ಕಜೆ ಮತ್ತಿತರರು ಉಪಸ್ಥಿತರಿದ್ದರು.