ಉಡುಪಿ : ಕೋಟಾ ಶ್ರೀನಿವಾಸ ಪೂಜಾರಿ ಯವರಿಂದ ತೆರವಾದ ವಿಧಾನ ಪರಿಷತ್ ಕ್ಷೇತ್ರಕ್ಕೆ ಚುನಾವಣಾ ಆಯೋಗ ದಿನಾಂಕ ನಿಗದಿಪಡಿಸಿದೆ.
ಆಕ್ಟೊಬರ್ 3 ನಾಮಪತ್ರ ಸಲ್ಲಿಕೆ ಕೊನೆಯ ದಿನವಾಗಿದ್ದು, 7 ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ. ಆಕ್ಟೊಬರ್ 21 ರಂದು ಬೆಳಿಗ್ಗೆ 8 ಗಂಟೆಯಿಂದ 4 ಗಂಟೆ ಯವರೆಗೆ ಚುನಾವಣೆ ನಡೆಯಲಿದೆ.
24 ರಂದು ಫಲಿತಾಂಶ ಪ್ರಕಟವಾಗಲಿದೆ. ಕೋಟಾ ಶ್ರೀನಿವಾಸ ಪೂಜಾರಿ ಸಂಸತ್ ಸದಸ್ಯರಾದ ಹಿನ್ನೆಲೆಯಲ್ಲಿ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.