ಪುತ್ತೂರು : ಹಲವು ದಿನಗಳ ಹಿಂದೆ ಮೃತಪಟ್ಟ ವ್ಯಕ್ತಿಯೊಬ್ಬರ ಮೃತದೇಹವನ್ನು ವಿಶ್ವ ಹಿಂದೂ ಪರಿಷದ್, ಬಜರಂಗದಳ ಕಾರ್ಯಕರ್ತರು ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಬಲ್ನಾಡ್ ಇದರ ಆಂಬ್ಯುಲೆನ್ಸ್ ಮೂಲಕ ಕರೆದೊಯ್ದು ಅಂತ್ಯಸಂಸ್ಕಾರ ನೆರವೇರಿಸಿದರು.
ಬಲ್ನಾಡ್ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ಪರಮೇಶ್ವರಿ ಬಬ್ಬಿಲಿ, ಕಿರಣ್ ಕುಮಾರ್ ಬಲ್ನಾಡ್,ರಾಮಚಂದ್ರ ರೈ ಬೀಡು,ವೆಂಕಟಕೃಷ್ಣ ಭಟ್ ಪಾಲೆಚಾರು ಮತ್ತು ಆರೋಗ್ಯ ಇಲಾಖೆ ಮತ್ತು ಪೋಲಿಸ್ ಇಲಾಖೆ ಜೊತೆ ಕಾರ್ಯಕರ್ತರು ಸೇರಿ ಮೃತದೇಹವನ್ನು ಸಾಗಿಸಿ ಪುತ್ತೂರು ಮಡಿವಾಳಕಟ್ಟೆ ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದರು.