ಬೆಂಗಳೂರು : ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ನರಗನಹಳ್ಳಿ ಎನ್ನುವ ಈ ಗ್ರಾಮದಲ್ಲಿ ಕಳೆದ ಹಲವು ದಿನಗಳಿಂದ ಪುಂಡರ ಹಾವಳಿ ಹೆಚ್ಚಾಗಿದೆ.
ದಿನಪೂರ್ತಿ ಹೊಲದಲ್ಲಿ ಕೆಲಸ, ಜಾನುವಾರುಗಳ ಆರೈಕೆ ಎಂದು ಕೆಲಸ ಮಾಡಿ ಮನೆಗೆ ಬರುವ ಜನರು ನಿದ್ದೆಗೆ ಜಾರುತ್ತಿದ್ದಂತೆ ಮನೆ ಬಳಿಗೆ ಬರುವ ಪುಂಡರು, ಬಾಗಿಲುಗಳನ್ನ ಬಡೆದು ಪರಾರಿ ಆಗುತ್ತಿದ್ದಾರಂತೆ. ಇದೇ ರೀತಿ ಕಳೆದ ಮೂರು ದಿನಗಳ ಹಿಂದೆ ಮಹಿಳೆಯೊಬ್ಬರು ತಡರಾತ್ರಿ ಶೌಚಕ್ಕೆ ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಕಿಡಿಗೇಡಿಗಳು, ಆಕೆಯ ಬಾಯಿ ಮುಚ್ಚಿ, ನಿರ್ಜನ ಪ್ರದೇಶಕ್ಕೆ ಎಳೆದೊಯ್ದಿದ್ದು, ಸರಗಳ್ಳತನಕ್ಕೆ ಯತ್ನಿಸಿದ್ದಾರೆ. ಆದ್ರೆ, ಮಹಿಳೆ ಸರಗಳ್ಳತನ ಮಾಡಲು ಬಿಡದಿದಕ್ಕೆ ಹಲ್ಲೆ ನಡೆಸಿ, ನಂತರ ಆಕೆಯ ಬಟ್ಟೆಗಳನ್ನ ಹರಿದು ಪ್ರಜ್ಞೆ ತಪ್ಪಿಸಿ ಸ್ಥಳದಿಂದ ಎಸ್ಕೇಪ್ ಆಗಿದ್ದಾರೆ.
ನಿರ್ಜನ ಪ್ರದೇಶದಲ್ಲಿ ಪ್ರಜ್ಞಾಹೀನವಾಗಿ ಬಿದ್ದಿದ್ದ ಮಹಿಳೆಯನ್ನ ಕುಟುಂಬಸ್ಥರು ಆಸ್ವತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದು, ನಂತರ ಕಿಡಿಗೇಡಿಗಳ ಬಗ್ಗೆ ಪರಿಶೀಲನೆ ನಡೆಸಿದ್ದಾರೆ. ಆದ್ರೆ, ಗ್ರಾಮದಲ್ಲಿ ರಾತ್ರಿ ವೇಳೆ ಬೀದಿ ದೀಪಗಳಿಲ್ಲದ ಕಾರಣ ಅಪರಿಚಿತರು ಯಾರು ಎನ್ನುವುದು ಗೊತ್ತಾಗಿಲ್ಲ. ಈ ಹಿನ್ನಲೆ ಗ್ರಾಮಸ್ಥರೆಲ್ಲರೂ ರಾತ್ರಿ ವೇಳೆ ಬಾಗಿಲು ಬಡಿಯುವ ಖದೀಮರ ಹೆಡೆಮುರಿ ಕಟ್ಟಲು ಮುಂದಾಗಿದ್ದಾರೆ. ಹೀಗಾಗಿ ಕಳೆದ ರಾತ್ರಿ ಗ್ರಾಮಕ್ಕೆ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತರು ಬಾಗಿಲು ಬಡಿಯುತ್ತಿದ್ದಂತೆ ಹಿಡಿಯಲು ಮುಂದಾಗಿದ್ದು, ಅವರು ಬೈಕ್ ಗ್ರಾಮದಲ್ಲೆ ಬಿಟ್ಟು ಎಸ್ಕೇಪ್ ಆಗಿದ್ದಾರೆ. ಬಳಿಕ ಗ್ರಾಮಸ್ಥರು ಬೈಕ್ ಸಮೇತ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ದೂರು ನೀಡಿದ್ದಾರೆ.