ಕಡಬ : ಕರ್ನಾಟಕ ರಾಜ್ಯ ಸರಕಾರ ಕಳೆದ ಒಂದೂವರೆ ವರ್ಷದ ಆಡಳಿತದ ಅವಧಿಯಲ್ಲಿ ಸಂಪೂರ್ಣ ವಿಫಲತೆಯನ್ನು ಕಾಣುವುದರೊಂದಿಗೆ ಹಗರಣದಲ್ಲಿ ಸಿಕ್ಕಿ ಹಾಕಿಕೊಂಡಿದೆ. ಈ ಬಗ್ಗೆ ರಾಜ್ಯಾದ್ಯಂತ ಪ್ರವಾಸ ಮಾಡಿ ಜನರಿಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದೇನೆ. ಈಗಾಗಲೇ ಜೆಡಿಎಸ್ ವತಿಯಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸದಸ್ಯತ್ವ ನೋಂದಣಿ ಹಾಗೂ ಬೂತ್ ಕಮಿಟಿಯನ್ನು ರಚನೆ ಮಾಡಲಾಗಿದೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ಜೆಡಿಎಸ್ ಬಲವರ್ಧನೆಗೊಳ್ಳಲಿದೆ. ಪಕ್ಷದ ಕಾರ್ಯಕರ್ತರನ್ನು ಹುರಿ ದುಂಬಿಸುವ ಕೆಲಸ ಮಾಡುತಿದ್ದೇವೆ. ಯಾವುದೇ ಚುನಾವಣೆ ಇರಲಿ ಪಕ್ಷದ ಸಂಘಟನೆಗೆ ಒತ್ತನ್ನು ಕೊಡುವ ಕೆಲಸ ಮಾಡಬೇಕಾಗಿದೆ. ಎಂದು ರಾಜ್ಯ ಜೆಡಿಎಸ್ ಯುವ ಘಟಕದ ಅಧ್ಯಕ್ಷ ಹಾಗೂ ಮುಖಂಡ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಅವರು ಪತ್ನಿ ಸಮೇತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಹಾಗೂ ಪ್ರಸಾದವನ್ನು ಸ್ವೀಕರಿಸಿದ ನಂತರ ಮಾತನಾಡಿದರು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಜೆಡಿಎಸ್ ಉಪಾಧ್ಯಕ್ಷ ಜಾಕೆ ಮಾಧವ ಗೌಡ ಕಡಬ ತಾಲೂಕು ಜೆಡಿಎಸ್ ಅಧ್ಯಕ್ಷ ಸಯ್ಯದ್ ಮೀರಾ ಸಾಹೇಬ್ ಜೆಡಿಎಸ್, ಒಕ್ಕಲಿಗ ಗೌಡ ಮುಖಂಡರುಗಳಾದ ಸಂತೋಷ್ ಜಾಕೆ ,ಗೋಪಾಲ ಎಣ್ಣೆ ಮಜಲ್, ಶಿವರಾಮ ಏನಕ್ಕಲ್, ಸುಬ್ರಮಣ್ಯ ಗ್ರಾಮ ಸಮಿತಿ ಅಧ್ಯಕ್ಷ ಡಾ. ಎ. ಎ. ತಿಲಕ್, ಕಾರ್ಯದರ್ಶಿ ವಿಶ್ವನಾಥ ನಡುತೋಟ, ಉಪಾಧ್ಯಕ್ಷ ನಾರಾಯಣ ಅಗ್ರಹಾರ, ಪೂರ್ವ ಅಧ್ಯಕ್ಷ ಲೊಕೇಶ ಬಿಎನ್, ಜಯರಾಮ ಕಟ್ಟೆಮನೆ ಹಲವರು ಉಪಸ್ಥಿತರಿದ್ದರು.





























