ವಿಟ್ಲ : ಹಾಸನದಲ್ಲಿರುವ ಜನಪ್ರಿಯ ಆಸ್ಪತ್ರೆಯ ಸಹಸಂಸ್ಥೆ, ಮಂಗಳೂರಿನ ಪಡೀಲಿನಲ್ಲಿ ನೂತನವಾಗಿ ಪ್ರಾರಂಭಗೊಂಡ ಜನಪ್ರಿಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಅದ್ದೂರಿ ಉದ್ಘಾಟನಾ ಸಮಾರಂಭ ಹಾಗೂ ಜನಪ್ರಿಯ ಸಮ್ಮಿಲನ ಕಾರ್ಯಕ್ರಮ ಸೆ.29 ರಂದು ಸಾಯಂಕಾಲ ನಡೆಯಲಿದೆ.
ಆಸ್ಪತ್ರೆಯನ್ನು ಸ್ಪೀಕರ್ ಯು.ಟಿ.ಖಾದರ್ ಉದ್ಘಾಟಿಸಲಿದ್ದಾರೆ.
ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ್ ಬರ್ತ್ ಬ್ಲೂಮ್ ವಿಭಾಗವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಕ್ಷೇತ್ರದ ಗಣ್ಯರು ಉಪಸ್ಥಿತರಿರಲಿದ್ದಾರೆ ಎಂದು ಜನಪ್ರಿಯ ಫೌಂಡೇಶನ್ ನ ಅಧ್ಯಕ್ಷ ಡಾ.ಅಬ್ದುಲ್ ಬಶೀರ್ ವಿ.ಕೆ. ತಿಳಿಸಿದ್ದಾರೆ.