ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವ್ಯಕ್ತಿಯನ್ನು ಸಂಪ್ಯ ಪೊಲೀಸರು ತೆಲಂಗಾಣದಲ್ಲಿ ಬಂಧಿಸಿದ ಘಟನೆ ನಡೆದಿದೆ.
ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಮಹಮ್ಮದ್ ಇಕ್ಬಾಲ್ @ ಪ್ರವೀಣ್ ಕುಮಾರ್ ತೋಮರ್ (53)ಬಂಧಿತ ಆರೋಪಿ.
ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅ,ಕ್ರ 15/2008 ಕಲಂ 416, 420, 511 ಜೊತೆಗೆ 34 Ipc ಪ್ರಕರಣದಲ್ಲಿ, ಸುಮಾರು 14 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಮಹಮ್ಮದ್ ಇಕ್ಬಾಲ್ @ಪ್ರವೀಣ್ ಕುಮಾರ್ ತೊಮರ್ ಎಂಬಾತನನ್ನು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕರು ರವಿ ಬಿ ಎಸ್ ರವರು ಹಾಗೂ ಮಾನ್ಯ ಪೊಲೀಸ್ ಉಪನಿರೀಕ್ಷಕರು ಜಂಬೂರಾಜ್ ಮಹಾಜನ್ (ಕಾ&ಸು)ರವರ ಮಾರ್ಗದರ್ಶನದಲ್ಲಿ, ASI ಪರಮೇಶ್ವರ್ ಕೆ, Hc 396 ಮಧು ಕೆ ಎನ್, pc 1968 ಅಸ್ತಮಾ ರವರುಗಳ ತಂಡ ತೆಲಂಗಾಣ ರಾಜ್ಯದ ಹೈದ್ರಾಬಾದ್ ನಲ್ಲಿ ಪತ್ತೆ ಹಚ್ಚಿ, ದಿನಾಂಕ 28-09-2024 ರಂದು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.