ಪುತ್ತೂರು : ಬಿಲ್ಲವ ಸಮಾಜದ ಹೆಣ್ಣುಮಕ್ಕಳ ಬಗ್ಗೆ ಮತ್ತು ಭಜನೆ ಮಾಡುವ ಹೆಣ್ಣು ಮಕ್ಕಳ ಬಗ್ಗೆ ಹಾಗೂ ಹಿಂದೂ ಸಂಘಟನೆಯ ಕಾರ್ಯಕರ್ತರ ಬಗ್ಗೆ ಕೀಳುಮಟ್ಟದ ಪದ ಬಳಸಿ ಅವಮಾನ ಮಾಡಿರುವ ಆರೋಪದ ಮೇರೆಗೆ ಅರಣ್ಯ ಸಂರಕ್ಷಣಾ ಅಧಿಕಾರಿ ಸಂಜೀವ ಪೂಜಾರಿಯವರನ್ನು ಬೆಳ್ಳಾರೆ ಪೊಲೀಸರು ಬಂಧಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಅರಣ್ಯ ಸಂರಕ್ಷಣಾ ಅಧಿಕಾರಿ ಸಂಜೀವ ಪೂಜಾರಿ ವಿರುದ್ಧ ಹಿಂದೂ ಜಾಗರಣ ವೇದಿಕೆ ನೇತೃತ್ವದಲ್ಲಿ ಭಜನೆ ಮಾಡುವ ಮೂಲಕ ಪುತ್ತೂರು ಡಿವೈಎಸ್ಪಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗಿತ್ತು.
ಹಿಂದೂ ಸಂಘಟನೆ ಮುಖಂಡರು ಪೊಲೀಸ್ ಠಾಣೆಗೆ ಭೇಟಿ ನೀಡಿ ಸಂಜೀವ ಪೂಜಾರಿಯವರನ್ನು ಬಂಧಿಸುವಂತೆ ಆಗ್ರಹಿಸಿದ್ದರು.