ಏಪ್ರಿಲ್ 20 ರಂದು ಯಾದವ ಸಭಾ ಕೇಂದ್ರ ಸಮಿತಿ ಮಂಗಳೂರು ಹಾಗೂ ಮಂಗಳೂರು, ಸುಳ್ಯ, ಬಂಟ್ವಾಳ, ಬೆಳ್ತಂಗಡಿ, ಉಳ್ಳಾಲ ಇದರ ಸಹಯೋಗದೊಂದಿಗೆ, ಪುತ್ತೂರು ತಾಲೂಕು ಯಾದವ ಸಮಿತಿಯ ಆಶ್ರಯದಲ್ಲಿ ಪಾಣಾಜೆಯಲ್ಲಿ ನಡೆಯುವ ಜಿಲ್ಲಾ ಯಾದವ ಸಮ್ಮೇಳನ ಹಾಗೂ ಏಪ್ರಿಲ್ 6 ರಂದು ನಡೆಯುವ ಜಿಲ್ಲಾ ಯಾದವ ಕ್ರೀಡಾಕೂಟದ ಪೂರ್ವಭಾವಿ ಸಭೆಯು ಬಂಟ್ವಾಳ ತಾಲೂಕು ಯಾದವ ಸಮಿತಿಯ ಆಶ್ರಯದಲ್ಲಿ ದುರ್ಗಾಪರಮೇಶ್ವರಿ ಅಯ್ಯಪ್ಪ ಭಜನಾ ಮಂದಿರ ಅಡ್ಯನಡ್ಕ ಇಲ್ಲಿ ನಡೆಯಿತು.
ಈ ಸಭೆಯಲ್ಲಿ ಜಿಲ್ಲಾ ಯಾದವ ಕ್ರೀಡಾಕೂಟದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಲಾಯಿತು. ಯಾದವ ಸಭಾ ಕೇಂದ್ರ ಸಮಿತಿ ಉಪಾಧ್ಯಕ್ಷರಾದ ಗೋಪಾಲ ಅರಿಕೆಪದವವರು ಬಿಡುಗಡೆಗೊಳಿಸಿದರು. ಸಭಾಧ್ಯಕ್ಷತೆಯನ್ನು ಯಾದವ ಸಭಾ ಕೇಂದ್ರ ಸಮಿತಿ ಕರ್ನಾಟಕ ಅಧ್ಯಕ್ಷರಾದ ಏ.ಕೆ ಮಣಿಯಾಣಿಯವರು ವಹಿಸಿದರು. ಯಾದವ ಸಭಾ ಕೇಂದ್ರ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಕಾವೂರು ಪ್ರಾಸ್ತಾವಿಕವಾಗಿ ಮಾತನಾಡಿದರು. ಯಾದವ ಸಭಾ ತಾಲೂಕು ಸಮಿತಿ ಪುತ್ತೂರು ಇದರ ಅಧ್ಯಕ್ಷರಾದ ಶ್ರೀಪ್ರಸಾದ್ ಪಾಣಾಜೆ ಕ್ರೀಡಾಕೂಟದ ವಿವರಣೆ ನೀಡಿದರು.

ವೇದಿಕೆಯಲ್ಲಿ ಯಾದವ ಸಭಾ ಕೇಂದ್ರ ಸಮಿತಿಯ ಕೋಶಾಧಿಕಾರಿ ಚಂದ್ರಶೇಖರ ಅಳಿಕೆ, ಸುಳ್ಯ ಯಾದವ ಸಭಾ ತಾಲೂಕು ಸಮಿತಿ ಅಧ್ಯಕ್ಷರಾದ ಕರುಣಾಕರ ಹಾಸ್ಪರೆ, ಮಂಗಳೂರು ತಾಲೂಕು ಸಮಿತಿ ಅಧ್ಯಕ್ಷರಾದ ಕೃಷ್ಣ ಬಿ ಪಡೀಲ್, ಬೆಳ್ತಂಗಡಿ ತಾಲೂಕು ಸಮಿತಿ ಅಧ್ಯಕ್ಷರಾದ ರಾಧಾಕೃಷ್ಣ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕೇಂದ್ರ ಸಮಿತಿಯ ಪದಾಧಿಕಾರಿಗಳು ವಿವಿಧ ತಾಲೂಕು ಹಾಗೂ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು ಸದಸ್ಯರು ಸಮುದಾಯ ಬಾಂಧವರು ಭಾಗವಹಿಸಿದ್ದರು. ಬಂಟ್ವಾಳ ತಾಲೂಕು ಯಾದವ ಸಮಿತಿಯ ಅಧ್ಯಕ್ಷರಾದ ಅಶೋಕ್ ಆಮೈ ಸ್ವಾಗತಿಸಿ ವಂದಿಸಿದರು.