ಉಜಿರೆ: ಪುನೀತ್ ಕೆರೆಹಳ್ಳಿ ಇಂದು ಉಜಿರೆಗೆ ಬಂದಿದ್ದು ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಉಂಟಾದ ಘಟನೆ ನಡೆಯಿತು.
ಉಜಿರೆಗೆ ಬಂದ ಪುನೀತ್ ಕೆರೆಹಳ್ಳಿ ಯನ್ನು ಜಿಲ್ಲಾಧಿಕಾರಿ ಆದೇಶದಂತೆ ತಡೆದು ವಾಪಸ್ ಹೋಗುವಂತೆ ಮನವಿ ಮಾಡಿದರು ಈ ಸಂದರ್ಭ ಇತರೆ ಗುಂಪು ಸ್ಥಳಕ್ಕೆ ಆಗಮಿಸಿದ ಹಿನ್ನಲೆ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು.
ಸದ್ಯ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದು ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿದ್ದಾರೆ ಎಂದು ತಿಳಿದು ಬಂದಿದೆ.