ಪುತ್ತೂರು: ಮುಂಡೂರು ಮೃತ್ಯುಂಜೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಲೆಕ್ಕ ಪತ್ರ ಮಂಡನೆಯ ಸಭೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಆಗಿನ ಅಧ್ಯಕ್ಷರಾದ ಲೋಕಪ್ಪ ಗೌಡ ದೂರು ನೀಡಿದ್ದರು.
ಈ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಪುತ್ತೂರಿನ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಈ ಬಗ್ಗೆ ನ್ಯಾಯಾಲಯವು ಸುದೀರ್ಘವಾದ ತನಿಕೆ ನಡೆಸಿ ಸಾಕ್ಷಾಧಾರಗಳ ಕೊರತೆಯನ್ನು ಪರಿಗಣಿಸಿ ನ್ಯಾಯಾದೀಶರಾದ ದೇವರಾಜ್ ವೈ ಎಚ್ ರವರು ಅರುಣ್ ಕುಮಾರ್ ಪುತ್ತಿಲರನ್ನು ದೋಷಮುಕ್ತ ಗೊಳಿಸಿದರು.
ಅರುಣ್ ಕುಮಾರ್ ಪುತ್ತಿಲ ಪರ ವಕೀಲರಾದ ದೇವಾನಂದ ಕೆ, ಚಿನ್ಮಯ್ ರೈ ಈಶ್ವರಮಂಗಲ, ಕುಮಾರಿ ಹರಿಣಿ ವಾದಿಸಿದರು.