ಪುತ್ತೂರು: ಮುಖ್ಯರಸ್ತೆಯ ಏಳ್ಮುಡಿ ಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗಣೇಶ್ ರೇಡಿಯೊ ಹೌಸ್ ನ ಮಾಲಕ ಪ್ರೇಮಾನಂದ ಡಿ (56) ಅನೋರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಮರೀಲ್ ನಿವಾಸಿಯಾಗಿರುವ ಅವರು ಕೆಲ ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದ್ದು ಮೃತರು ಪತ್ನಿ, ಮಗಳು,ಅಳಿಯ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.