ದಿನಾಂಕ 15-05-2025 ರಂದು ಸಂಜೆ, ಪುತ್ತೂರು ತಾಲೂಕು ಪುತ್ತೂರು ಕಸಬಾ ಗ್ರಾಮದ ಬೈಪಾಸ್ ರಸ್ತೆಯಲ್ಲಿರುವ ಜೈನಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭರತ್ ಕುಂಮ್ಡೇಲು ಎಂಬಾತನು ಕೋಮುಧ್ವೇಶವನ್ನು ಉಂಟುಮಾಡುವಂತಹ ಭಾಷಣವನ್ನು ಮಾಡಿರುವುದಾಗಿದೆ. ಆರೋಪಿಯ ಮಾತುಗಳಿಂದ ಸಾರ್ವಜನಿಕ ನೆಮ್ಮದಿಗೆ ಭಂಗ ಉಂಟಾಗುವಂತಹ ಸಾಧ್ಯತೆಗಳಿರುವುದರಿಂದ ಆರೋಪಿತನ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ ಕ್ರ 35/2025 ಕಲಂ-196,353(2) BNS 2023. ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.