ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಆರೋಪಿ ಚೊಟ್ಟೆ ನೌಷಾದ್ ಮೇಲೆ ಬಿ ಬ್ಯಾರಕ್ನ ಹಲವು ಸಹ ಕೈದಿಗಳಿಂದ ಕಲ್ಲು ಮತ್ತು ಸಿಕ್ಕ ಸಿಕ್ಕ ವಸ್ತುಗಳಿಂದ ಅಟ್ಯಾಕ್ ಮಾಡಿರುವಂತಹ ಘಟನೆ ಮಂಗಳೂರು ಸೆಂಟ್ರಲ್ ಜೈಲಿನಲ್ಲಿ ನಡೆದಿದೆ. ಅದೃಷ್ಟವಶಾತ್ ನೌಷಾದ್ ಪಾರಾಗಿದ್ದಾನೆ.
ಆರೋಪಿ ಚೊಟ್ಟೆ ನೌಷಾದ್ ಪೊಲೀಸ್ ಕಸ್ಟಡಿ ಅವಧಿ ಇಂದು ಅಂತ್ಯವಾಗಿತ್ತು. ಹಾಗಾಗಿ ಪೊಲೀಸರು ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಬಳಿಕ ಮೈಸೂರು ಕಾರಾಗೃಹಕ್ಕೆ ಶಿಫ್ಟ್ ಮಾಡಲು ಸಿದ್ಧತೆ ನಡೆಸಿದ್ದರು. ಈ ಮಧ್ಯೆ ನೌಷಾದ್, ಮಂಗಳೂರು ಜೈಲಿನಲ್ಲಿ ಯಾರನ್ನೋ ನೋಡಬೇಕು ಎಂದಿದ್ದ. ಹಾಗಾಗಿ ಜೈಲಿನಲ್ಲಿ ಮತ್ತೋರ್ವ ಕೈದಿ ಭೇಟಿಗಾಗಿ ಪೊಲೀಸರು ಕರೆದುಕೊಂಡು ಬಂದಿದ್ದರು. ಈ ವೇಳೆ ಇದ್ದಕಿದ್ದಂತೆ ನೌಷಾದ್ ಮೇಲೆ ಸಹ ಕೈದಿಗಳು ಅಟ್ಯಾಕ್ ಮಾಡಿದ್ದಾರೆ.
ಈ ಘಟನೆ ಸಂಜೆ 6:40 ರ ಸುಮಾರಿಗೆ ಜೈಲಿನ ಕ್ವಾರಂಟೈನ್ ಸೆಲ್ ವಿಭಾಗದಲ್ಲಿ ನಡೆದಿದ್ದು , ಕೆಲವು ವಿಚಾರಣಾಧೀನ ಕೈದಿಗಳು ಕಚೇರಿ ಪ್ರದೇಶದ ಬಳಿ ನಿಂತು ” ಬಿ ” ಬ್ಯಾರಕ್ನಲ್ಲಿದ್ದ ಕೈದಿಗಳು ತಮ್ಮತ್ತ ನೋಡಿದರು ಎಂಬ ಕಾರಣಕ್ಕಾಗಿ ಪರಸ್ಪರ ಅವ್ಯಾಚ ಶಬ್ದಗಳೊಂದಿ ಬೈದಾಡಿಕೊಂಡು ಕೂಗಾಡಿದ್ದು, ಈ ಸಮಯದಲ್ಲಿ ಸಿಮೆಂಟ್ ಬ್ಲಾಕ್ನ್ನು ಹೊಡೆದು ಅದರ ತುಂಡುಗಳನ್ನು ಎಸೆದಿದ್ದಾರೆ ಎಂದು ವರದಿಯಾಗಿದೆ .
ಇದೇ ವೇಳೆ ” ಬಿ ” ಬ್ಯಾರಕ್ನ ಕೆಲವು ವಿಚಾರಣಾಧೀನ ಕೈದಿಗಳು ಒಳಗಿನ ಗೇಟ್ ಅನ್ನು ಬಲವಂತವಾಗಿ ತೆರೆದು ನ್ಯಾಯಾಂಗ ವಿಭಾಗದ ಕಚೇರಿಗೆ ಹೋಗಿ , ಅಲ್ಲಿ ಅವರು ತಮ್ಮ ಕೈಗಳಿಂದ ಬಾಗಿಲಿನ ಗಾಜಿನ ಫಲಕವನ್ನು ಹೊಡೆದು ಹಾನಿಯನ್ನುಂಟು ಮಾಡಿದರು .ಈ ಗಲಭೆಯ ಸಮಯದಲ್ಲಿ , ಒಬ್ಬ ವಿಚಾರಣಾಧೀನ ಕೈದಿಯ ಕಾಲಿಗೆ ಗಾಯವಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದರು.
ಮಂಗಳೂರು ಜಿಲ್ಲಾ ಜಿಲ್ಲಾ ಸೂಪರಿಂಟೆಂಡೆಂಟ್ ಅವರು ಬರ್ಕೆ ಪೊಲೀಸ್ ರಾಣೆಯಲ್ಲಿ ದೂರು ನೀಡಿದ್ದು , ಗಲಭೆಯಲ್ಲಿ ಭಾಗಿಯಾಗಿರುವ ಕೈದಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೋರಿದ್ದಾರೆ. ಜೈಲು ಅಧಿಕಾರಿಗಳು ಪ್ರಸ್ತುತ ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಮತ್ತು ಇನ್ನು ಇಂತಹ ಘಟನೆಗಳು ಮರುಕಳಿಸದಂತೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ .