ಉಳ್ಳಾಲ: ಯುವಕನೋರ್ವ ತಾನು ಕಲಿತ ಶಾಲೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕುರ್ನಾಡು ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೇ 19ರಂದು ನಡೆದಿದೆ.
ಕುರ್ನಾಡು ಹೂವಿನಕೊಪ್ಪಲ ನಿವಾಸಿ ಸುಧೀರ್ (32) ಆತ್ಮಹತ್ಯೆ ಮಾಡಿಕೊಂಡ ಯುವಕ.
ವೃತ್ತಿಯಲ್ಲಿ ಪೇಂಟರ್ ಆಗಿದ್ದ ಸುಧೀರ್, ನಸುಕಿನ ಜಾವ ಬೈಕ್ನಲ್ಲಿ ಹಾಲು ತರಲು ಮನೆಯಿಂದ ತೆರಳಿದ್ದರು. ತಡವಾದರೂ ಮಗ ಬಾರದ ಕಾರಣ ಅವರ ತಾಯಿ ಸುಧೀರ್ ಅವರನ್ನು ಹುಡುಕಿಕೊಂಡು ಹೋದಾಗ ಮನೆಯ ಸಮೀಪದ ಶಾಲೆಯ ಹೊರಗಡೆ ಬೈಕ್ ಕೀ ಸಮೇತ ಪತ್ತೆಯಾಗಿತ್ತು.
ಬಳಿಕ ಶಾಲೆಯೊಳಗೆ ಗಮನಿಸುವಾಗ ಸುಧೀರ್ ಅವರು ಶಾಲೆಯ ಮಹಡಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.
ಅವಿವಾಹಿತರಾಗಿದ್ದ ಸುಧೀರ್ ಅವರ ಸಹೋದರಿಯ ಪತಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರಿಗೆ ತನ್ನ ಕಿಡ್ನಿ ದಾನ ಮಾಡುವಂತೆ ಹಾಗೂ ಮೇ 29ರಂದು ನಿಗದಿಯಾಗಿರುವ ಸಹೋದರಿನ ವಿವಾಹವನ್ನು ನಿಲ್ಲಿಸದಂತೆ ಡೆತ್ನೋಟ್ನಲ್ಲಿ ಬರೆದಿದ್ದಾರೆ.
ಘಟನೆ ಸಂಬಂಧ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.