ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಇಬ್ಬರು ವ್ಯಕ್ತಿಗಳು ಅನುಚಿತವಾಗಿ ವರ್ತಸುತ್ತಿರುವ ಮಾಹಿತಿಯಂತೆ ಪೊಲೀಸರು ಅವರನ್ನು ವಿಚಾರಿಸಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಓರ್ವ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟ ಮೇರೆಗೆ ಓರ್ವನ ವಿರುದ್ದ ಪೊಲೀಸರು ಪ್ರಕರಣ
ದಾಖಲಿಸಿದ್ದಾರೆ.
ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮಹಮ್ಮದ್ ಕಲಂದರ್ ಶಾಫಿ(24) ಎಂಬವರು ಮಾದಕ ವಸ್ತು ಸೇವನೆ ಮಾಡಿರುವ ವ್ಯಕ್ತಿಯಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಾಗಿದೆ.
ಖಚಿತ ಮಾಹಿತಿ ಮೇರೆಗೆ ಎಸ್.ಐ ಆಂಜನೇಯ ರೆಡ್ಡಿಯವರು ಸಿಬ್ಬಂದಿಗಳ ಜೊತೆ ಕೆದಿಲ ಗ್ರಾಮದ ಸತ್ತಿಕಲ್ಲು ಸ್ಥಳಕ್ಕೆ ಹೋಗಿ ಇಬ್ಬರು ವ್ಯಕ್ತಿಗಳು ಅನುಚಿತವಾಗಿ ವರ್ತಿಸಿರುವ ಕುರಿತು ವಿಚಾರಿಸಿ ಅವರನ್ನು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು.
ಈ ವೇಳೆ ಮಹಮ್ಮದ್ ಕಲಂದರ್ ಶಾಫಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದ್ದು, ಅವರ ವಿರುದ್ದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.