ಬಂಟ್ವಾಳ :ಸಜೀಪಮುನ್ನೂರು ಗ್ರಾಮದ ಉಮ್ಮರ್ ಫಾರೂಕ್
ಎಂಬವರು ದಿನಾಂಕ 11.06.2025 ರಂದು ಮುಂಜಾನೆ, ಮನೆಯಿಂದ ಜೀಪ್ ನಲ್ಲಿ ದೇರಳಕಟ್ಟೆ ಕಡೆಗೆ ತೆರಳುತ್ತಾ, ಸಜೀಪ ನಡು ಗ್ರಾಮದ ದೇರಾಜೆ ಬಸ್ ನಿಲ್ದಾಣದ ಬಳಿ ತಲುಪಿದಾಗ, ಅವರು ತೆರಳುತ್ತಿದ್ದ ರಸ್ತೆಯಲ್ಲಿ ವಿರುದ್ದ ದಿಕ್ಕಿನಿಂದ ಇಬ್ಬರು ಅಪರಿಚಿತರು ಬೈಕ್ ನಲ್ಲಿ ಬಂದು, ಬೈಕ್ ನಲ್ಲಿದ್ದ ಹಿಂಬದಿ ಸವಾರನಾಗಿ ಕುಳಿತಿದ್ದ ವ್ಯಕ್ತಿಯು ತಲವಾರು ಬೀಸಿರುತ್ತಾನೆ.
ಈ ವೇಳೆ ತಲವಾರು ತಾಗಿ ಪಿರ್ಯಾದಿದಾರರ ವಾಹನದ ಸೈಡ್ ಮಿರರ್ ಗಾಜು ಒಡೆದಿರುತ್ತದೆ.
ಘಟನೆಯ ಬಗ್ಗೆ ಅವರು ದಿನಾಂಕ; 13.06.2025 ರಂದು ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅ ಕ್ರ ನಂಬ್ರ : 68/2025 ಕಲಂ : 109, 324(4), ಜೊತೆಗೆ 3(5) BNS ರಂತೆ ಪ್ರಕರಣ ದಾಖಲಾಗಿದೆ.