ಬೆಳ್ತಂಗಡಿ : ವೇಶ್ಯಾವಾಟಿಕೆ ಚಟುವಟಿಕೆ ಶಂಕೆ ಮೇರೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸೆಕ್ಟರ್ ಸುಬ್ಬಾಪುರ್ ಮಠ ನೇತೃತ್ವದಲ್ಲಿ ಬೆಳ್ತಂಗಡಿ ಮತ್ತು ಉಜಿರೆಯಲ್ಲಿರುವ ಲಾಡ್ಜ್ ಗಳ ಮೇಲೆ ಜೂ.14 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ.
ಈ ವೇಳೆ ಉಜಿರೆಯ ಶ್ರೀ ದುರ್ಗಾ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸಲು ಯುವತಿಯನ್ನು ಕರೆತಂದಿದ್ದು ಬಯಲಾಗಿದೆ.
ಉಜಿರೆ ಬಸ್ ನಿಲ್ದಾಣದ ಬಳಿ ಇರುವ ಶ್ರೀ ದುರ್ಗಾ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆಗೆ ಕರೆಸಿದ್ದ ಓರ್ವ ಯುವತಿಯನ್ನು ಪೊಲೀಸರು ರಕ್ಷಣೆ ಮಾಡಲಾಗಿದ್ದು. ಲಾಡ್ಜ್ ನ ಮ್ಯಾನೇಜರ್ ಬೆಳ್ತಂಗಡಿ ತಾಲೂಕಿನ ಸಾವ್ಯ ಗ್ರಾಮದ ಬಾರೆಗುಡ್ಡೆ ಸತೀಶ್ ಪೂಜಾರಿ (49) ಮತ್ತು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ ನಿವಾಸಿ ಯೋಗಿಶ್ ಆಚಾರ್ಯ (49) ಎಂಬವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಲಾಡ್ಜ್ ಮಾಲೀಕ ಉಜಿರೆಯ ರಮೇಶ್ ಶೆಟ್ಟಿ , ಮ್ಯಾನೇಜರ್ ಸತೀಶ್ ಪೂಜಾರಿ, ಸಿಬ್ಬಂದಿ ಯೋಗೀಶ್ ಆಚಾರ್ಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.