ಕಾಣಿಯೂರು: ಕಡಬ ತಾಲೂಕಿನ ದೋಳ್ವಾಡಿ ಗ್ರಾಮದ ಕೂರೇಲು ಎಂಬಲ್ಲಿ ವಿದ್ಯುತ್ ಶಾಕ್ ಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಜೂ 16ರಂದು ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಕೂರೇಲು ನಿವಾಸಿ ಪುರಂದರ ಎಂಬವರ ಪತ್ನಿ ಜಲಜಾಕ್ಷಿ (35) ಎಂದು ಗುರುತಿಸಲಾಗಿದೆ.
ಇವರು ಮದ್ಯಾಹ್ನ 2.30 ರ ವೇಳೆಗೆ ತಮ್ಮ ತೋಟದಲ್ಲಿರುವ ಕೃಷಿ ಪಂಪು ಚಾಲನೆ ಮಾಡಲು ಪ್ರಯತ್ನಿಸುತ್ತಿದ್ದ ವೇಳೆ ಪಂಪ್ ಚಾಲನೆಗೊಂಡಿಲ್ಲವೆಂದು ವಿದ್ಯುತ್ ಕೇಬಲ್ ಮುಟ್ಟಿದ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣ ಅವರನ್ನು ಕಾಣಿಯೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಅಷ್ಟರಲ್ಲೇ ಅವರ ನಿಧನರಾಗಿದ್ದಾರೆ.
ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಮೆಸ್ಕಾಂ ಸವಣೂರು ಶಾಖಾ ಕಛೇರಿಯ ಶಾಖಾಧಿಕಾರಿ ರಾಜೇಶ್, ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ, ಕಾಣಿಯೂರು ಗ್ರಾಮ ಪಂಚಾಯಿತಿ ಪಿಡಿಒ ರಘು ಬಿ.ಎನ್., ಸ್ಥಳೀಯ ಗ್ರಾ.ಪಂ. ಸದಸ್ಯರಾದ ಲೋಕಯ್ಯ ಪರವ ದೋಳ್ಳಾಡಿ, ದೇವಿಪ್ರಸಾದ್ ದೋಳಾಡಿ, ಅಂಬಾಕ್ಷಿ ಕೂರೇಲು, ತಾರಾನಾಥ ಇಡ್ಯಡ್ಕ, ಮೀರಾ ಕಲೆಂಜೋಡಿ ಮತ್ತಿತರರು ಭೇಟಿ ನೀಡಿದರು.