ಸ್ಯಾಂಡಲ್ವುಡ್ ನಟ ದರ್ಶನ್ ದಂಪತಿ ಕೇರಳದ ಕೊಟ್ಟಿಯೂರು ಮಹಾದೇವ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ.
ಈ ಹಿಂದೆ ಕೇರಳದ ಶ್ರೀ ಮಾಡಾಯಿ ಕಾವು ಭಗವತಿ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದ ನಟ ದರ್ಶನ್ ಇದೀಗ ಕುಟುಂಬ ಸಮೇತರಾಗಿ ಕೊಟ್ಟಿಯೂರು ಮಹಾದೇವ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ.
ಮಳೆಯಲ್ಲೇ ಮಹಾದೇವನ ದರ್ಶನ ಮಾಡಿರುವ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ ಮಹಾದೇವನಿಗೆ ವಿಶೇಷವಾದ ಪ್ರಾರ್ಥನೆ ಸಲ್ಲಿಸಿದ್ದಾರೆ.
ಇನ್ನೂ, ಈ ದೇವಸ್ಥಾನದ ವಿಶೇಷತೆ ಏನೆಂದರೆ, ವರ್ಷದಲ್ಲಿ ಎರಡು ತಿಂಗಳ ಕೆಲವು ದಿನಗಳು ಮಾತ್ರ ತೆರೆಯಲಾಗುತ್ತದೆ.