ಬೆಳಗಾವಿ : ಜಿಲ್ಲೆಯ ಮೂಡಲಗಿ ತಾಲೂಕಿನ ಶಿವಾಪುರ ಗ್ರಾಮದ ಅಡವಿಸಿದ್ದೇಶ್ವರ ಮಠದಲ್ಲಿ ಸ್ವಾಮೀಜಿಯಿಂದ ಅನಾಚಾರ ಆರೋಪ ಕೇಳಿಬಂದಿದೆ. ಅಡವಿಸಿದ್ದರಾಮಶ್ರೀ ಸ್ವಾಮೀಜಿ ಮಹಿಳೆಯೊಂದಿಗೆ ಇರುವುದನ್ನು ಕಂಡ ಗ್ರಾಮಸ್ಥರು ಏಕಾಏಕಿ ಮಠಕ್ಕೆ ನುಗ್ಗಿ ಸ್ವಾಮೀಜಿಯನ್ನು ತರಾಟೆ ತೆಗೆದುಕೊಂಡರು.
ಅಷ್ಟೇ ಅಲ್ಲದೆ ಹಲ್ಲೆ ಮಾಡಿದ್ದಾರೆ. ಈ ವೇಳೆ ಕೆಲ ಯುವಕರು ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಮಹಿಳೆಯ ಮಗಳ ಬಟ್ಟೆ ಹರಿದು ಎಳೆದಾಡಿದ್ದಾರೆ. ಮೂಡಲಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಬಾಗಲಕೋಟೆ ಮೂಲದ ಮಹಿಳೆ ಮತ್ತು ಮಗಳು ಮಠಕ್ಕೆ ಬಂದಿದ್ದು, ರಾತ್ರಿ ಮಠದಲ್ಲೇ ತಂಗಿದ್ದಾರೆ. ಮಹಿಳೆಯೊಂದಿಗೆ ಸ್ವಾಮೀಜಿ ಇದ್ದಾರೆಂದು ಯುವಕರು ಮಠಕ್ಕೆ ನುಗಿದ್ದು, ಈ ವೇಳೆ ಸ್ವಾಮೀಜಿ, ಮಹಿಳೆ ಮತ್ತು ಬಾಲಕಿ ಒಂದೇ ರೂಮ್ನಲ್ಲಿರುವುದು ಕಂಡುಬಂದಿದೆ.
ಇದೇ ವೇಳೆ ಯುವಕರು ಸ್ವಾಮೀಜಿಯನ್ನು ತಳ್ಳಿ ಮಹಿಳೆ, ಅಪ್ರಾಪ್ತ ಮಗಳ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಬಾಲಕಿಯ ಬಟ್ಟೆ ಹರಿದು ಎಳೆದಾಡಿದ್ದಾರೆ. ರಕ್ಷಣೆಗೆ ನಿಂತ ಸ್ವಾಮೀಜಿಗೆ ಯುವಕರು ಕಪಾಳಮೋಕ್ಷ ಮಾಡಿದ್ದಾರೆ.
ಇನ್ನು ಸ್ಥಳಕ್ಕೆ ಭೇಟಿ ನೀಡಿದ ಮೂಡಲಗಿ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದರು. ಮಹಿಳೆಗೆ ಬುದ್ಧಿವಾದ ಹೇಳಿ ಕಳುಹಿಸಿದ್ದಾರೆ. ಇತ್ತ ಗ್ರಾಮಸ್ಥರು ರಾತ್ರಿಯೇ ಅಡವಿಸಿದ್ದರಾಮ ಸ್ವಾಮೀಜಿಯನ್ನ ಹೊರಹಾಕಿದ್ದಾರೆ. ಸದ್ಯ ಬೆಳಗಾವಿ ಜಿಲ್ಲೆಯ ಗೋಕಾಕ್ನಲ್ಲಿದ್ದಾರೆ.