ಕಡಬ: ಜೀರ್ಣೋದ್ಧಾರ ಕೆಲಸ ಜರಗುತ್ತಿರುವ ಕಡಬ ತಾಲೂಕಿನ ಇತಿಹಾಸ ಪ್ರಸಿದ್ಧ ಕ್ಷೇತ್ರ ಶರವೂರು ದೇವಸ್ಥಾನಕ್ಕೆ ಕರ್ನಾಟಕ ವಿಧಾನ ಸಭಾಧ್ಯಕ್ಷ ಯು.ಟಿ ಖಾದರ್ ಭೇಟಿ ನೀಡಿದರು.
ಸುಬ್ರಹ್ಮಣ್ಯ ಹೊರತುಪಡಿಸಿ ಕಡಬ ತಾಲೂಕಿನ ಏಕೈಕ ‘ಎ’ ದರ್ಜೆಯ ದೇವಸ್ಥಾನ ಇದಾಗಿದ್ದು, ಐತಿಹಾಸಿಕ ಹಿನ್ನಲೆ ಹೊಂದಿರುವ ಈ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯ ನಡೆಯುತ್ತಿದೆ.
ಶರವೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹೇಮಂತ್ ರೈ ಮನವಳಿಕೆಗುತ್ತು ಸ್ಪೀಕರ್ ಯು.ಟಿ ಖಾದರ್ ಅವರನ್ನು ಸ್ವಾಗತಿಸಿದರು.
ದೇವಳದ ಅಭಿವೃದ್ದಿ ಸಂಬಂಧಿಸಿದಂತೆ ಹಲವು ಸಲಹೆಗಳನ್ನು ಖಾದರ್ ನೀಡಿದರು.
ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ರಾವ್ ನಗ್ರಿ, ಮಾಜಿ ಅಧ್ಯಕ್ಷ ಗೋಪಾಲಕೃಷ್ಣ ಪಡ್ಡಿಲ್ಲಾಯ, ಆಲಂಕಾರು ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ದಯಾನಂದ ರೈ ಮನವಳಿಕೆಗುತ್ತು, ವ್ಯವಸ್ಥಾಪನ ಮತ್ತು ಅಭಿವೃದ್ಧಿ ಸಮಿತಿ ಸದಸ್ಯರಾದ ರಾಧಾಕೃಷ್ಣ ರೈ ಪರಾರಿಗುತ್ತು, ಗಣೇಶ್ ಇರಿಂಜ, ಶೇಷಪ್ಪ ಪೂಜಾರಿ, ಸದಾನಂದ ಕುಮಾರ್ ಮಡ್ಯೊಟ್ಟು, ಗುರುಪ್ರಸಾದ್ ಅಲೆಕ್ಕಿ, ವಿಜಯಕುಮಾರ್ ಕೆದಿಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು.