ಪುತ್ತೂರು : ಸಾಮಾಜಿಕ ಜಾಲತಾಣದಲ್ಲಿ ಜೈನ ಧರ್ಮದ ಸ್ವಾಮೀಜಿ ಹಾಗೂ ಪ್ರಧಾನಮಂತ್ರಿಯನ್ನು ನಿಂದಿಸಿರುವ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಸಾಮಾಜಿಕ ಜಾಲತಾಣವಾದ ಪೇಸ್ ಬುಕ್ ನಲ್ಲಿ ಕರುನಾಡಿನ ಮಿನುಗುವ ನಕ್ಷತ್ರ” ಎಂಬ ಪೇಜ್ ಹೊಂದಿರುವ ವ್ಯಕ್ತಿಯು ಪೇಸ್ ಬುಕ್ ನಲ್ಲಿ ಪೋಸ್ಟ್ ಒಂದಕ್ಕೆ ಕಮೆಂಟ್ ಮಾಡುವ ವೇಳೆ, ಜೈನ ಧರ್ಮದ ಸ್ವಾಮೀಜಿಗೆ ಹಾಗೂ ಭಾರತದ ಪ್ರಧಾನ ಮಂತ್ರಿಗಳ ಗೌರವಕ್ಕೆ ದಕ್ಕೆ ಉಂಟು ಮಾಡುವ ರೀತಿಯಲ್ಲಿ ಹಾಗೂ ಸಾರ್ವಜನಿಕ ಶಾಂತಿ ನೆಮ್ಮಧಿಗೆ ದಕ್ಕೆಯನ್ನುಂಟು ಮಾಡುವ ರೀತಿಯಲ್ಲಿ ಸಂದೇಶ ರವಾನಿಸಿದ್ದು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪಡ್ನೂರು ನಿವಾಸಿ ಜೀವಂಧರ್ ಜೈನ್ ದೂರು ನೀಡಿದ್ದಾರೆ
ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರ 50/2025 ಕಲಂ- 196(1)(a),353(2) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಳ್ಳಲಾಗಿದೆ.