ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರ ಕನಸಿನ ಕೂಸು ಪುತ್ತೂರು- ಮಂಗಳೂರು ನಾನ್ ಸ್ಟಾಪ್ ಎಕ್ಸ್ ಪ್ರೆಸ್ ಸಂಚಾರ ನಾಳೆ ( ಜು.14) ರಂದು ಪ್ರಾರಂಭಗೊಳ್ಳಲಿದೆ.
ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದಿಂದ ಹೊರಡುವ ಬಸ್ಸು ಎಲ್ಲೂ ನಿಲುಗಡೆಯಿಲ್ಲದೆ ನೇರವಾಗಿ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣಕ್ಕೆ ತಲುಪಲಿದೆ. ಪ್ರತೀ ಒಂದು ಗಂಟೆಗೊಂದು ಬಸ್ ಹೊರಡಲಿದೆ. ಮಹಿಳೆಯರಿಗೆ ಈ ಬಸ್ ನಲ್ಲಿ ಶಕ್ತಿ ಯೋಜನೆಯನುಸಾರ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ನಾಳೆ ಬೆಳಿಗ್ಗೆ 11.00 ಗಂಟೆಗೆ ನೂತನ ಬಸ್ ವ್ಯವಸ್ಥೆಗೆ ಶಾಸಕರು ಚಾಲನೆ ನೀಡಲಿದ್ದಾರೆ.
ಸುಮಾರು ಒಂದು ಗಂಟೆ ಅವಧಿಯಲ್ಲಿ ಬಸ್ ಪುತ್ತೂರಿನಿಂದ ಮಂಗಳೂರು ತಲುಪಲಿದೆ. ಸ್ವಂತ ವಾಹನ ಇದ್ದವರೂ ಈ ಬಸ್ಸಲ್ಲಿ ತೆರಳಬಹುದಾಗಿದೆ ಯಾಕೆಂದರೆ ಅತಿ ವೇಗದಲ್ಲಿ ಈ ಬಸ್ಸು ಸಂಚರಿಸಲಿರುವ ಕಾರಣ ಸ್ವಂತ ವಾಹನದಷ್ಟೇ ಸಮಯದಲ್ಲಿ ಮಂಗಳೂರು ತಲುಪುತ್ತದೆ. ಹೊಸ ವ್ಯವಸ್ಥೆಯಲ್ಲಿ ಎಲ್ಲರೂ ಪ್ರಯಾಣಿಸುವ ಮೂಲಕ ಸಹಕಾರ ನೀಡಿ ಸರಕಾರಿ ವ್ಯವಸ್ಥೆಗೆ ಬೆಂಬಲ ನೀಡಬೇಕು – ಅಶೋಕ್ ರೈ ಶಾಸಕರು ,ಪುತ್ತೂರು