ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ವತಿಯಿಂದ ಆ.03 ರಂದು ಕೆಸರ್ದ ಗೊಬ್ಬು 2025 ಕಾರ್ಯಕ್ರಮ ಕಾರ್ಜಾಲು ಗದ್ದೆಯಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಜು.21 ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ್ ಭಟ್, ಅರುಣ್ ಕುಮಾರ್ ಪುತ್ತಿಲ, ಶ್ರೀಕೃಷ್ಣ ಉಪಾಧ್ಯಾಯ ಸಹಿತ ಹಲವು ಗಣ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು.