ಕಡಬ:ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಯುವತಿ ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಕಡಬ ತಾಲೂಕಿನ ಕುಂತೂರು ಗ್ರಾಮದ ಇಡಾಳ ನಿವಾಸಿ ಕರಿಯಪ್ಪ ಯಾನೆ ಕೇಶವ ಗೌಡ ಎಂಬವರ ಪುತ್ರಿ ಶ್ವೇತಾ(23) ಎಂದು ಗುರುತಿಸಲಾಗಿದೆ.
ಪದವೀಧರೆಯಾಗಿದ್ದ ಈಕೆ ಕಳೆದ ಎರಡು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು. ಆರಂಭದಲ್ಲಿ ಜ್ವರ ಕಾಣಿಸಿಕೊಂಡು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ಬಳಿಕ ಮಂಗಳೂರಿನ ವಿವಿಧ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರೂ ಕಿಡ್ನಿ ಸಂಭoದಿತ ಖಾಯಿಲೆ ವಾಸಿಯಾಗಿರಲಿಲ್ಲ. ಸೋಮವಾರ ಬೆಳಿಗ್ಗೆ ಉಸಿರಾಟದ ತೊಂದರೆ ಕಾಣಿಸಿಕೊಂಡು ಆಲಂಕಾರಿನ ಖಾಸಗಿ ಕ್ಲಿನಿಕ್ಗೆ ಕರೆದುಕೊಂಡು ಬಂದು ಪುತ್ತೂರಿನ ಆಸ್ಪತ್ರೆಗೆ ಕೊಂಡಯ್ದರೂ ಅಷ್ಟರಲ್ಲಿ ಆಕೆಯ ಪ್ರಾಣ ಪಕ್ಷಿ ಹಾರಿಹೋಗಿತ್ತು. ಮೃತ ಯವತಿ ತಂದೆ, ತಾಯಿ ಹಾಗೂ ಸಹೋದರ ಅಗಲಿದ್ದಾರೆ.