ವಿಟ್ಲ :ಧಾರ್ಮಿಕ ಶ್ರಧ್ದಾ ಕೇಂದ್ರಕ್ಕೆ ಸಂಬಂಧಿಸಿದ ಕಾಣಿಕೆ ಕಟ್ಟೆಯನ್ನು ಬಂಟ್ವಾಳ ತಾಲೂಕು ಕನ್ಯಾನ ಗ್ರಾಮದ ದೇಲಂತ ಬೆಟ್ಟು ಶಾಲಾ ಪಕ್ಕದ ರಸ್ತೆಯ ಬದಿಯಲ್ಲಿ ಹಾಗೂ ದೇಲಂತಬೆಟ್ಟು ಚರ್ಚಿನ ಕೆಳಗಡೆ ರಸ್ತೆಯ ಬದಿಯಲ್ಲಿ ಅಳವಡಿಸಿದ್ದು, ಕಾಣಿಕೆ ಕಟ್ಟೆಗಳಲ್ಲಿ ಸಂಗ್ರವಾಗುವ ಹಣವನ್ನು ತೆಗೆಯಲು ದಿನಾಂಕ:26-07-2025 ರಂದು ಸದ್ರಿ ಸ್ಥಳಗಳಿಗೆ ತೆರಳಿದಾಗ, ಯಾರೋ ಕಳ್ಳರು ಎರಡೂ ಕಾಣಿಕೆ ಕಟ್ಟೆಗಳ ಬೀಗವನ್ನು ಒಡೆದು ಸುಮಾರು 12,000/- ರೂ ನಿಂದ 15,000/-ರೂ ಹಣವನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ.
ಈ ಬಗ್ಗೆ ಬಂಟ್ವಾಳ ತಾಲೂಕಿನ ದೇಲಂತಬೆಟ್ಟು, ಕನ್ಯಾನ ನಿವಾಸಿ
ಡಿ.ನಾರಾಯಣ ರಾವ್ ಪ್ರಾಯ (72) ಎಂಬವರು ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅಕ್ರ.95/2025 ಕಲಂ. 303(2) BNS ರಂತೆ ಪ್ರಕರಣ ದಾಖಲಾಗಿರುತ್ತದೆ.
ಸದ್ರಿ ಪ್ರಕರಣವನ್ನು ತನಿಖೆ ನಡೆಸಲಾಗಿ ಆರೋಪಿತರಾದ
1)ತ್ವಾಹಿದ್ ಪ್ರಾಯ 19 ವರ್ಷ, ವಾಸ:ವಿಟ್ಲ ಕಸಬಾ ಗ್ರಾಮ, ಬಂಟ್ವಾಳ
2)ಉಮ್ಮರ್ ಫಾರೂಕ್ (18), ವಾಸ:ವಿಟ್ಲ ಕಸಬಾ ಗ್ರಾಮ, ಬಂಟ್ವಾಳ
3)ಮೊಹಮ್ಮದ್ ನಬೀಲ್, ಪ್ರಾಯ 18 ವರ್ಷ, ವಾಸ:ವಿಟ್ಲ ಕಸಬಾ ಗ್ರಾಮ, ಬಂಟ್ವಾಳ ಎಂಬವರುಗಳನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.