ದಿನಾಂಕ 06/08/2025 ರಂದು ಧರ್ಮಸ್ಥಳ ಪಾಂಗಳ ಕ್ರಾಸ್ ಎಂಬಲ್ಲಿ ಯೂಟ್ಯೂಬರ್ ಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈಗಾಗಲೇ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ: 46/25 ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
ಅದೇ ದಿನ ಸದ್ರಿ ಘಟನಾ ಸ್ಥಳದಲ್ಲಿದ್ದ ಕಡಬ ಇಚ್ಚಿಲಂಪಾಡಿ ನಿವಾಸಿ ಜಯಂತ್ ಟಿ ಎಂಬವರ ಮೇಲೆ ಕೆಲವು ಕಿಡಿಗೇಡಿಗಳು ಹಲ್ಲೆಗೆ ಹಾಗೂ ಕೊಲೆಗೆ ಯತ್ನಿಸಿರುತ್ತಾರೆ ಎಂಬುದಾಗಿ ಸದ್ರಿ ಜಯಂತ್ ಟಿ ರವರು ಈ ದಿನ ದಿನಾಂಕ: 11.08.2025ರಂದು ಧರ್ಮಸ್ಥಳ ಠಾಣೆಯಲ್ಲಿ ದೂರನ್ನು ನೀಡಿದ್ದು, ಈ ಬಗ್ಗೆ ಪರಿಶೀಲಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.