ಮಂಗಳೂರು ನಗರದ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ದೇರಳಕಟ್ಟೆ ಪರಿಸರದ ಮುತ್ತೂಟ್ ಪೈನಾನ್ಸ್ ಬ್ಯಾಂಕ್ ಕಳ್ಳತನಕ್ಕೆ ಪ್ರಯತ್ನ ನಡೆಸಿದ ಪ್ರಕರಣದಲ್ಲಿ ದಸ್ತಗಿರಿಯಾಗದೇ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ.
ಪ್ರಕರಣದ ವಿವರ
ದಿನಾಂಕ: 29-03-2025 ರಂದು ರಾತ್ರಿ ಸಮಯ ದೇರಳಕಟ್ಟೆ ಪರಿಸರದಲ್ಲಿರುವ ಹೆಚ್.ಎಮ್ ಕಾಂಪ್ಲೇಕ್ಸ್ ನ ಮುತ್ತೂಟ್ ಪೈನಾನ್ಸ್ ಕಚೇರಿಯ ಮುಂದಿನ ಬಾಗಿಲಿನ ಸೈರನ್ ಹೂಟರ್ ನ ಕೇಬಲ್ ಅನ್ನು ತುಂಡು ಮಾಡಿ ಪೈನಾನ್ಸ್ ಕಂಪನಿಯಲ್ಲಿ ಕಳವು ಮಾಡಲು ಪ್ರಯತ್ನ ಮಾಡಿರುವುದಾಗಿ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಮೊ ನಂ: 42/2025 ಕಲಂ: 331[40], 305, 62, 13 BNS ರಂತೆ ಪ್ರಕರಣ ದಾಖಲಾರುತ್ತದೆ.
ಈ ಕಳ್ಳತನ ಪ್ರಕರಣದಲ್ಲಿ ಈಗಾಗಲೇ ಕೇರಳ ಇಡುಕ್ಕಿ ಮೂಲದ ಮುರಳಿ ಮತ್ತು ಕಾಂಞಿಗಾಡ್ ನ ಆರ್ಷದ್ ಎಂಬಾತರು ದಸ್ತಗಿರಿಯಾಗಿರುತ್ತಾರೆ. ಈ ಪ್ರಕರಣದಲ್ಲಿ ಪತ್ತೆಯಾಗದೇ ತಲೆಮರೆಸಿಕೊಂಡಿದ್ದ ಹಾಗೂ ಈ ಹಿಂದೆ ನಡೆದ ರಾಜಧಾನಿ ಜುವೆಲ್ಲರಿ ಶಾಪ್ ಕಳ್ಳತನ ಹಾಗೂ ಕೇರಳ ರಾಜ್ಯದ ವಿಜಯ ಬ್ಯಾಂಕ್ ಕಳ್ಳತನದ ಮುಖ್ಯ ಸಂಚುಕೋರನಾದ ಅಬ್ದುಲ್ ಲತೀಫ್ @ ಲತೀಫ್ ಪ್ರಾಯ 47 ವರ್ಷ ತಂದೆ : ಕುಂಜಿ ಅಬ್ದುಲ್ಲಾ ವಾಸ: ಮಂಡಿಯಾನ್ ಮನೆ, ಅರಿಕಾರ ಅಂಚೆ ಬಳಲಿ, ತಾಲ್ಲೂಕು : ವೆಲ್ಲರಿಕುಂಡು, ಜಿಲ್ಲೆ : ಕಾಸರಗೋಡು, ಕೇರಳ ರಾಜ್ಯ ಎಂಬಾತನನ್ನು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮದ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿರುತ್ತದೆ.
ಅಬ್ದುಲ್ ಲತೀಫ್ @ ಲತೀಫ್ ಎಂಬಾತನ ಮೇಲೆ ಈ ಹಿಂದೆ ಕೇರಳ ರಾಜ್ಯದ ಹೊಸದುರ್ಗ ಪೊಲೀಸ್ ಠಾಣಾ ವ್ಯಾಪ್ತಿಯ ರಾಜಧಾನಿ ಜುವೆಲ್ಲರಿ ಶಾಪ್ ನ ಸುಮಾರು 20 ಕೆಜಿಯಷ್ಟು ಬಂಗಾರವನ್ನು ಕಳ್ಳತನ ಮಾಡಿದ ಪ್ರಕರಣ ಮತ್ತು ಕೇರಳ ರಾಜ್ಯದ ಚಂದೇರ್ ಪೊಲೀಸ್ ಠಾಣಾ ವ್ಯಾಪ್ತಿಯ ಚೆರವತ್ತೂರು ವಿಜಯ ಬ್ಯಾಂಕ್ ನ ಸುಮಾರು 15.80 ಕೆಜಿಯಷ್ಟು ಬಂಗಾರ ಮತ್ತು 2.5 ಲಕ್ಷ ರೂ. ಹಣವನ್ನು ಕಳ್ಳತನ ಮಾಡಿದ ಪ್ರಕರಣಗಳಲ್ಲಿ ಪ್ರಮುಖ ಆರೋಪಿಯಾಗಿರುತ್ತಾನೆ
ಈ ಕಾರ್ಯಾಚರಣೆಯಲ್ಲಿ ಸಿಸಿಬಿ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ