ಪುತ್ತೂರು: ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಇದರ ಆಶ್ರಯದಲ್ಲಿ ವಿದ್ಯಾರ್ಥಿ ನಿಧಿ ವಿತರಣಾ ಸಮಾರಂಭ ಸೆ.09 ರಂದು ಪುತ್ತೂರಿನ ಕೊಂಬೆಟ್ಟಿನ ಬಂಟರ ಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಶ್ರೀರಾಮ್ ಫೈನಾನ್ಸ್ ಲಿ. ನ ಜೋನಲ್ ಬಿಸಿನೆಸ್ ಹೆಡ್ ಶರತ್ಚಂದ್ರ ಭಟ್ ಕಾಕುಂಜೆ ಉದ್ಘಾಟಿಸಲಿದ್ದು ವಿದ್ಯಾರ್ಥಿ ನಿಧಿಯನ್ನು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮತ್ತು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ವಿತರಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ನಗರ ಠಾಣಾ ಪೊಲೀಸ್ ನಿರೀಕ್ಷಕರಾದ ಜಾನ್ಸನ್ ಡಿಸೋಜಾ, ಮಹಾಲಿಂಗೇಶ್ವರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರ ಭಟ್, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಸದಸ್ಯರಾದ ಕುಂಬ್ರ ದುರ್ಗಾಪ್ರಸಾದ್ ರೈ, ವಿವೇಕಾನಂದ ಮಹಾವಿದ್ಯಾಲಯದ ಸ್ನಾತಕೋತ್ತರ ವಿಭಾಗದ ಮುಖ್ಯಸ್ಥೆ ವಿಜಯ ಸರಸ್ವತಿ, ಸುಳ್ಯ ವಕೀಲರ ಸಂಘದ ಅಧ್ಯಕ್ಷ ಸುಕುಮಾರ್ ಕೊಡ್ತುಗುಳಿ, ಧರಿತ್ರಿ ಅಸೋಸಿಯೇಟ್ಸ್ ನ ಮಾಲಕರಾದ ಮುರುಳಿಕೃಷ್ಣ ಹಸಂತಡ್ಕ,ಅಜರ್ ಲಾಜಿಸ್ಟಿಕ್ಸ್ ನ ಮಾಲಕ ಖಲಂದರ್,ಗೂಡ್ಸ್ ವಾಹನ ಚಾಲಕ ಮಾಲಕರ ಸಂಘ ಪುತ್ತೂರು ಇದರ ಅಧ್ಯಕ್ಷ ರಘುರಾಮ ಪಾಟಳಿ , ಶ್ರೀರಾಮ್ ಫೈನಾನ್ಸ್ ನ ಲೀಗಲ್ ಹೆಡ್ ಉಲ್ಲಾಸ್ ವಿ ನಾಯಕ್, ಜೋನಲ್ ಪ್ರಾಡಕ್ಟ್ ಹೆಡ್ ನಾಗರಾಜ್ ಬಿ, ಸ್ಟೇಟ್ ಹೆಡ್ ಸದಾಶಿವ, ಜೋನಲ್ ಪ್ರಾಡಕ್ಟ್ ಹೆಡ್ ಚಂದ್ರಹಾಸ ಆಳ್ವ, ರೀಜಿನಲ್ ಬಿಸಿನೆಸ್ ಹೆಡ್ ಚೇತನ್ ಅರಸ್,ಮಹೇಶ್ ಕುಮಾರ್ ಸಿ ಯಚ್, ಜಯಪ್ರಕಾಶ್ ರೈ ಬಿ ಉಪಸ್ಥಿತರಿರಲಿದ್ದಾರೆ.