ದಿನಾಂಕ:15-09-2025 ರಂದು ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣ ರವರು ಸಿಬ್ಬಂದಿಗಳೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿರುವಾಗ ಬಂದ ಖಚಿತ ಮಾಹಿತಿಯಂತೆ, ಬಂಟ್ವಾಳ ತಾಲೂಕು ಅಳಿಕೆ ಗ್ರಾಮದ ಎರುಂಬು ರಸ್ತೆ ಎಂಬಲ್ಲಿ, ದ್ವಿಚಕ್ರ ವಾಹನದೊಂದಿಗೆ ಅನುಮಾಸ್ಪದವಾಗಿ ಮತ್ತು ಸಂಶಯಾಸ್ಪದವಾಗಿ ನಿಂತುಕೊಂಡಿದ್ದ ಮೂವರನ್ನು ವಿಚಾರಿಸಿದಾಗ ಅವರುಗಳು
1) ವಿಟ್ಲ ಕಸಬಾ ಗ್ರಾಮದ ಮಂಗಳಪದವು ನಿವಾಸಿ ಸನತ್ ಕುಮಾರ್, (23)
2) ವಿಟ್ಲ ಕಸಬಾ ಗ್ರಾಮದ ನಿವಾಸಿ ಮಹಮ್ಮದ್ ರಾಝಿಕ್ (23)
3) ವಿಟ್ಲ ಕಸಬಾ ಗ್ರಾಮದ ಮಂಗಳಪದವು ನಿವಾಸಿ ಚೇತನ್ (23) ಎಂಬುದಾಗಿ ತಿಳಿದುಬಂದಿದ್ದು,
ತಪಾಸಣೆ ನಡೆಸಲಾಗಿ ಅವರುಗಳು ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮೋಟಾರ್ ಸೈಕಲಿನಲ್ಲಿ ಅಕ್ರಮವಾಗಿ ಸ್ವಾಧೀನದಲ್ಲಿಟ್ಟುಕೊಂಡು ಗಿರಾಕಿಗಳಿಗೆ ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದು, ಅವರನ್ನು ವಶಕ್ಕೆ ಪಡೆದು, ಅವರ ಬಳಿಯಿದ್ದ
1) 6.27 ಗ್ರಾಂ ತೂಕದ ಗಾಂಜಾ
2)ಮೊಬೈಲ್ ಗಳು-3
3) ಸಣ್ಣ ಚೂರಿ-1
4) ದ್ವಿಚಕ್ರ ವಾಹನ -01 ವನ್ನು ಮುಂದಿನ ಕಾನುನುಕ್ರಮಕ್ಕಾಗಿ ಸ್ವಾಧೀನಪಡಿಸಿಕೊಂಡು, ಸದ್ರಿ ಆರೋಪಿಗಳ ವಿರುದ್ದ ವಿಟ್ಲ ಠಾಣೆಯಲ್ಲಿ ಅಕ್ರ 126/2025 ಕಲಂ: 8(b), 20(b)(ii)(A) NDPS Act ಜೊತೆಗೆ 3(5) BNS 2023 ರಂತೆ ಪ್ರಕರಣ ದಾಖಲಿಸಿಕೊಂಡು ಈ ಬಗ್ಗೆ ತನಿಖೆ ನಡೆಸಲಾಗಿ ಇನ್ನೊಬ್ಬ ಆರೋಪಿಯಾದ ಎರ್ಮೆ ಮಜಲು ನಿವಾಸಿ ಧ್ಯಾನ್ ಕರ್ಕೆರ 23 ವರ್ಷ ನನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.