ದಿನಾಂಕ 28-09-2022 ರಂದು ಫಿ.ಎಫ್.ಐ ಸಂಘಟನೆಯು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲಾಗಿತ್ತು. ಈಗಿರುವಾಗ ದಿನಾಂಕ 09-10-2025 ರಂದು ಆರೋಪಿ ಸೈಯ್ಯದ್ ಇಬ್ರಾಹಿಂ ತಂಙಳ್ ಪ್ರಾಯ: 55 ವರ್ಷ, ವಾಸ: ರಾಮ ಕುಂಜ ಗ್ರಾಮ, ಉಪ್ಪಿನಗಂಡಿ, ದಕ್ಷಿಣ ಕನ್ನಡ ಜಿಲ್ಲೆ ರವರು ಸಾಮಾಜಿಕ ಜಾಲತಾಣವಾದ ವಾಟ್ಸ್ ಆಪ್ ಗ್ರೂಪ್ ನಲ್ಲಿ ಕೇಂದ್ರ ಸರಕಾರದಿಂದ ನಿಷೇಧಕ್ಕೊಳಗಾದ Popular Front of India (PFI) ಸಂಘಟನೆಯ ಪರವಾಗಿ ಪೋಸ್ಟ್ ಪ್ರಕಟಿಸಿ, ಸದ್ರಿ ಸಂಘಟನೆಯ ಬಗ್ಗೆ ಸ್ವಯಂ ಪ್ರೇರಿತನಾಗಿ ಪ್ರಚಾರ ಮಾಡಿ ಅಪರಾಧಿಕ ಬಲ ಪ್ರದರ್ಶನದ ಮೂಲಕ ಆತಂಕ ಉಂಟು ಮಾಡಿದ ಕೃತ್ಯವೆಸಗಿದ್ದರಿಂದ, ಪಿ.ಎಸ್.ಐ ರವರು ಸಲ್ಲಿಸಿರುವ ದೂರನ್ನು ಆಧಾರಿಸಿ ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಅ.ಕ್ರ.113/2025 U/s 10 (a), (i), 13, 18 UAPA Act ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
ದಿನಾಂಕ 09-10-2025 ರಂದು ಆರೋಪಿಯನ್ನು ಮಂಗಳೂರು ನಗರದ ಉರ್ವ ಸ್ಟೋರ್ ಬಳಿಯಿಂದ ವಶಕ್ಕೆ ಪಡೆದು ದಸ್ತಗಿರಿ ಮಾಡಿದ್ದು, ಆತನ ವಶದಲ್ಲಿದ್ದ ಮೋಬೈಲ್ ಫೋನ್ ನ್ನು ಅಮಾನತ್ತು ಪಡಿಸಿಕೊಂಡು ತನಿಖೆಗೆ ಒಳಪಡಸಿರುತ್ತದೆ. ದಿನಾಂಕ 10-10-2025 ರಂದು ಸದ್ರಿ ಆರೋಪಿಯನ್ನು ಮಾನ್ಯ 49 ನೇ ಹೆಚ್ಚುವರಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ (CCH-50) ಮತ್ತು ಎನ್.ಐ.ಎ. ಪ್ರಕರಣಗಳ ವಿಶೇಷ ನ್ಯಾಯಾಲಯ ಬೆಂಗಳೂರು ಇಲ್ಲಿಗೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆರೋಪಿಯನ್ನು ದಿನಾಂಕ 24-10-2025 ವರೆಗೆ ನ್ಯಾಯಾಂಗ ವಶಕ್ಕೆ ನೀಡಿರುತ್ತಾರೆ.
ಆರೋಪಿಯ ವಿವರ: ಸೈಯ್ಯದ್ ಇಬ್ರಾಹಿಂ ತಂಙಳ್ ಪ್ರಾಯ: 55 ವರ್ಷ, ತಂದೆ: ದಿವಂಗತ ಸೈಯ್ಯದ್ ಹಸನ್ ತಂಙಳ್, ವಾಸ: ಬೀಜಾತಳಿ ಹೌಸ್, ರಾಮ ಕುಂಜ ಗ್ರಾಮ, ಉಪ್ಪಿನಗಂಡಿ, ಕಡಬ ತಾಲೂಕು. ದಕ್ಷಿಣ ಕನ್ನಡ ಜಿಲ್ಲೆ.