ವಿಟ್ಲ: ಗ್ರಾಪಂ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡ ಘನ ತ್ಯಾಜ್ಯ ಘಟಕ ಉದ್ಘಾಟನೆ ವೇಳೆ ಶಿಷ್ಟಾಚಾರ ಉಲ್ಲಂಘನೆ ಮಾಡಿರುವ ಕಾರಣಕ್ಕೆ ಗ್ರಾಪಂ ಪಿಡಿಒ ಸುಜಯರವರ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಶಾಸಕ ಅಶೋಕ್ ಕುಮಾರ್ ರೈ ಮೇಲಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಟ್ಲ ಮುಡ್ನೂರು ಗ್ರಾಪಂ ವ್ಯಾಪ್ತಿಯಲ್ಲಿ ಘನ ತ್ಯಾಜ್ಯ ಘಟಕವನ್ನು ನಿರ್ಮಾಣ ಮಾಡಲಾಗಿದ್ದು ಇದರ ಉದ್ಘಾಟನೆಗೆ ಶಾಸಕರನ್ನು ಶಿಷ್ಟಾಚಾರದ ಪ್ರಕಾರ ಆಹ್ವಾನಿಸಬೇಕಿತ್ತು.
ಆದರೆ ಕಾರ್ಯಕ್ರಮಕ್ಕೆ ಶಾಸಕರನ್ನು ಆಹ್ವಾನಿಸಿರಲಿಲ್ಲ, ಉದ್ಘಾಟನಾ ನಾಮಫಲಕದಲ್ಲೂ ಮಾಜಿ ಶಾಸಕರ ಹೆಸರನ್ನು ಹಾಕುವ ಮೂಲಕ ಸರಕಾರಿ ಶಿಷ್ಟಾಚಾರವನ್ನು ಉಲ್ಲಂಘನೆ ಮಾಡಲಾಗಿತ್ತು.
ಈ ಬಗ್ಗೆ ವಿವರಣೆ ಕೇಳಿದಾಗ ನನ್ನ ಗಮನಕ್ಕೆ ಬಾರದೆ ಈ ರೀತಿ ಘಟನೆ ನಡೆದಿದೆ ಎಂದು ಪಿಡಿಒ ತಿಳಿಸಿದ್ದರು. ಶಿಷ್ಟಾಚಾರ ಉಲ್ಲಂಘನೆ ಮಾಡಿರುವ ಪಿಡಿಒ ಸುಜಯ್ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಅಗತ್ಯ ಬಿದ್ದಲ್ಲಿ ಅವರನ್ನು ಅಮಾನತು ಮಾಡುವಂತೆ ಶಾಸಕ ಅಶೋಕ್ ಕುಮಾರ್ ರೈ ಮೇಲಾಧಿಕರಿಗಳಿಗೆ ಸೂಚನೆ ನೀಡಿದ್ದಾರೆ.