ಸುಬ್ರಹ್ಮಣ್ಯ : ಆದಿ ಸುಬ್ರಹ್ಮಣ್ಯದ ಸಭಾಭವನದಲ್ಲಿ ಮದುವೆಗೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ನ ತಿರುವಿನಲ್ಲಿ ಪಲ್ಟಿಯಾಗಿ ವ್ಯಾನ್ನಲ್ಲಿದ್ದವರಿಗೆ ಗಂಭೀರ ಗಾಯವಾದ ಘಟನೆ ವರದಿಯಾಗಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು.
ಈ ಮದುವೆಗೆ ಹುಡುಗನ ಕಡೆಯವರು ವಾಹನದಲ್ಲಿ ಬರುತ್ತಿದ್ದರು ಎನ್ನಲಾಗಿದೆ. ವಧು – ವರ ಇಬ್ಬರೂ ನಿನ್ನೆಯೇ ಹಾಲ್ಗೆ ಬಂದಿದ್ದರೆಂದು ತಿಳಿದು ಬಂದಿದೆ.
ವ್ಯಾನ್ನಲ್ಲಿದ್ದ ಹಲವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಪ್ರಥಮ ಚಿಕಿತ್ಸೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಹೆಚ್ಚಿನ ಚಿಕಿತ್ಸೆಗಾಗಿ ಆರು ಅಂಬ್ಯೂಲೆನ್ಸ್ಗಳಲ್ಲಿ ಮಂಗಳೂರಿಗೆ ಕರೆದೊಯ್ಯಲಾಗುತ್ತಿದೆ ಎಂದು ತಿಳಿದು ಬಂದಿದೆ.

























