ಪುತ್ತೂರು: ಬೆಟ್ಟಂಪಾಡಿ ಗ್ರಾಮದ ಪಾರ ನಿವಾಸಿ ಸುಬ್ರಹ್ಮಣ್ಯ ಭಟ್ರವರ ಪುತ್ರ ಪ್ರೀತಂ ಭಟ್(40)ರವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನ.3ರಂದು ನಿಧನರಾಗಿದ್ದಾರೆ.
ಮೃತರು ತಂದೆ ಸುಬ್ರಹ್ಮಣ್ಯ ಭಟ್, ತಾಯಿ ಮನೋರಮಾ ಎಸ್. ಭಟ್, ಪತ್ನಿ ಸ್ವಾತಿ, ಪುತ್ರ ಸುತೇಜ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಮೃತರ ಮನೆಗೆ ಹಲವಾರು ಗಣ್ಯರು ಭೇಟಿ ನೀಡಿ ಸಂತಾಪ ಸೂಚಿಸಿದ್ದಾರೆ.




























